Advertisement
ಸುದ್ದಿಗಳು

#AAP | ಮಂಗಳೂರು ನಗರದಲ್ಲಿ ರಸ್ತೆ ಸಮಸ್ಯೆ | ರಸ್ತೆ ದುರಸ್ತಿಗೆ ಆಮ್‌ಆದ್ಮಿಪಾರ್ಟಿ ಒತ್ತಾಯ |

Share

ಮಂಗಳೂರು ನಗರದ ರಸ್ತೆ ಹಾಗೂ ಬೀದಿದೀಪಗಳನ್ನು ತಕ್ಷಣವೇ ದುರಸ್ತಿ ಪಡಿಸಬೇಕು ಎಂದು ಆಮ್‌ ಆದ್ಮಿ ಪಕ್ಷವು ಒತ್ತಾಯಿಸಿದೆ. ದ ಕ ಜಿಲ್ಲಾ ಎಎಪಿ ಗುರುವಾರ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ನೀಡಿದೆ.

ಮಂಗಳೂರು ನಗರದ ಮೂಲಸೌಕರ್ಯವು ತೀರಾ ಕಳಪೆ ಸ್ಥಿತಿಯಲ್ಲಿದೆ. ನಗರದ ಹಲವು ರಸ್ತೆಗಳು ಮತ್ತು ಬೀದಿ ದೀಪಗಳು ದಯನೀಯ ಸ್ಥಿತಿಯಲ್ಲಿದೆ. ಮುಖ್ಯವಾಗಿ ಈಗ ನಡೆಯುತ್ತಿರುವ ಕಾಮಗಾರಿಗಳು, ಮಳೆಯ ಪ್ರಮಾಣ ಮತ್ತು ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ರಸ್ತೆಗಳು ಹದಗೆಟ್ಟಿವೆ. ಹಲವೆಡೆ ರಸ್ತೆಗಳು ದುರಸ್ತಿ ಕಾಣದೇ ಬಹಳ ದಿನಗಳಾಗಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಗುಂಡಿ, ಹೊಂಡಗಳಿದ್ದು, ಮಳೆಗಾಲದಲ್ಲಿ ಮಾತ್ರ ಇವುಗಳ ಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಇದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ರಾತ್ರಿ ವೇಳೆ ಪಾದಚಾರಿಗಳೂ ಎಡವಿ ಬೀಳುತ್ತಾರೆ. ಇದಲ್ಲದೆ, ಈ ಗುಂಡಿಗಳು ಮತ್ತು ಹೊಂಡಗಳಲ್ಲಿ ಸಂಗ್ರಹವಾಗುವ ನೀರು ಸೊಳ್ಳೆಗಳ ಸಂತಾನೋತ್ಪತ್ತಿಗೆ ಸ್ಥಳವನ್ನು ಒದಗಿಸುತ್ತದೆ, ಇದರ ಪರಿಣಾಮವಾಗಿ ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಗಳು ಹರಡುವ ಸಾಧ್ಯತೆ ಇದೆ ಎಂದು ಆಮ್‌ ಆದ್ಮಿ ಪಕ್ಷವು ಮನವಿಯಲ್ಲಿ ತಿಳಿಸಿದೆ.

ಮಂಗಳೂರು ನಗರದ ಹಲವೆಡೆ ಬೀದಿ ದೀಪಗಳು ಕೆಟ್ಟು ನಿಂತಿದ್ದು, ರಸ್ತೆ ಕತ್ತಲಾಗಿದೆ. ಇಂತಹ ಸ್ಥಳಗಳು ಮಹಿಳೆಯರು ಮತ್ತು ಮಕ್ಕಳು, ಹಿರಿಯ ನಾಗರಿಕರು ಇತ್ಯಾದಿಗಳಿಗೆ ಅಸುರಕ್ಷಿತವಾಗಿದ್ದು, ಈ ಪ್ರದೇಶಗಳಲ್ಲಿ ಅಪರಾಧಗಳ ಭಯವಿದೆ. ಸಂಜೆಯ ವೇಳೆ ಚೈನ್ ಸ್ನ್ಯಾಚ್ ಮಾಡುವ ಕೆಲವು ಘಟನೆಗಳು ನಡೆದಿದ್ದು, ಕತ್ತಲೆಯ ಮರೆಯಲ್ಲಿ ಅಪರಾಧಿಗಳು ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ, ತಾವು ಕೂಡಲೇ ಕಾರ್ಯೋನ್ಮುಖರಾಗಿ ಅಗತ್ಯ ಕ್ರಮಗಳನ್ನು ಜರುಗಿಸಿ ಮಂಗಳೂರಿನ ಜನರು ರಸ್ತೆಗಳು ಮತ್ತು ಬೀದಿ ದೀಪಗಳನ್ನು ಉತ್ತಮ ರೀತಿಯಲ್ಲಿ ಉಪಯೋಗಿಸುವಂತೆ ಮಾಡಿಕೊಡಬೇಕು ಎಂದು ಆಮ್‌ ಆದ್ಮಿ ಪಕ್ಷವು ಒತ್ತಾಯಿಸಿದೆ.

ಮನವಿ ನೀಡುವ ವೇಳೆ ಆಮ್‌ ಆದ್ಮಿ ಪಕ್ಷದ  ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಎಎಪಿ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅಶೋಕ್ ಎಡಮಲೆ, ಪಕ್ಷದ  ಪ್ರಮುಖರಾದ ಶಾನನ್ ಪಿಂಟೋ, ಜೆರಾರ್ಡ್ ಟವರ್ಸ್, ಜಯಪ್ರಕಾಶ್ ರಾವ್, ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ನವೀನ್ ಚಂದ್ರ ಪೂಜಾರಿ, ಬೆನೆಟ್ ನವಿತಾ ಕ್ರಾಸ್ತಾ, ರೋನಿ ಕ್ರಾಸ್ತಾ, ಕೆ.ಎನ್.ಶ್ರೀನಿವಾಸ್, ಅವ್ರೆನ್ ಡಿಸೋಜ, ಸಿರಿಲ್ ಜಿವಾನ್, ವಲ್ಸ ಜಿವಾನ್ ಹಾಗೂ ಮತ್ತಿತರ  ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

10 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

10 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

14 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago