Advertisement
ಸುದ್ದಿಗಳು

#AAP | ಮಂಗಳೂರು ನಗರದಲ್ಲಿ ರಸ್ತೆ ಸಮಸ್ಯೆ | ರಸ್ತೆ ದುರಸ್ತಿಗೆ ಆಮ್‌ಆದ್ಮಿಪಾರ್ಟಿ ಒತ್ತಾಯ |

Share

ಮಂಗಳೂರು ನಗರದ ರಸ್ತೆ ಹಾಗೂ ಬೀದಿದೀಪಗಳನ್ನು ತಕ್ಷಣವೇ ದುರಸ್ತಿ ಪಡಿಸಬೇಕು ಎಂದು ಆಮ್‌ ಆದ್ಮಿ ಪಕ್ಷವು ಒತ್ತಾಯಿಸಿದೆ. ದ ಕ ಜಿಲ್ಲಾ ಎಎಪಿ ಗುರುವಾರ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ನೀಡಿದೆ.

Advertisement
Advertisement

ಮಂಗಳೂರು ನಗರದ ಮೂಲಸೌಕರ್ಯವು ತೀರಾ ಕಳಪೆ ಸ್ಥಿತಿಯಲ್ಲಿದೆ. ನಗರದ ಹಲವು ರಸ್ತೆಗಳು ಮತ್ತು ಬೀದಿ ದೀಪಗಳು ದಯನೀಯ ಸ್ಥಿತಿಯಲ್ಲಿದೆ. ಮುಖ್ಯವಾಗಿ ಈಗ ನಡೆಯುತ್ತಿರುವ ಕಾಮಗಾರಿಗಳು, ಮಳೆಯ ಪ್ರಮಾಣ ಮತ್ತು ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ರಸ್ತೆಗಳು ಹದಗೆಟ್ಟಿವೆ. ಹಲವೆಡೆ ರಸ್ತೆಗಳು ದುರಸ್ತಿ ಕಾಣದೇ ಬಹಳ ದಿನಗಳಾಗಿವೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಗುಂಡಿ, ಹೊಂಡಗಳಿದ್ದು, ಮಳೆಗಾಲದಲ್ಲಿ ಮಾತ್ರ ಇವುಗಳ ಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಇದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ರಾತ್ರಿ ವೇಳೆ ಪಾದಚಾರಿಗಳೂ ಎಡವಿ ಬೀಳುತ್ತಾರೆ. ಇದಲ್ಲದೆ, ಈ ಗುಂಡಿಗಳು ಮತ್ತು ಹೊಂಡಗಳಲ್ಲಿ ಸಂಗ್ರಹವಾಗುವ ನೀರು ಸೊಳ್ಳೆಗಳ ಸಂತಾನೋತ್ಪತ್ತಿಗೆ ಸ್ಥಳವನ್ನು ಒದಗಿಸುತ್ತದೆ, ಇದರ ಪರಿಣಾಮವಾಗಿ ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ರೋಗಗಳು ಹರಡುವ ಸಾಧ್ಯತೆ ಇದೆ ಎಂದು ಆಮ್‌ ಆದ್ಮಿ ಪಕ್ಷವು ಮನವಿಯಲ್ಲಿ ತಿಳಿಸಿದೆ.

Advertisement

ಮಂಗಳೂರು ನಗರದ ಹಲವೆಡೆ ಬೀದಿ ದೀಪಗಳು ಕೆಟ್ಟು ನಿಂತಿದ್ದು, ರಸ್ತೆ ಕತ್ತಲಾಗಿದೆ. ಇಂತಹ ಸ್ಥಳಗಳು ಮಹಿಳೆಯರು ಮತ್ತು ಮಕ್ಕಳು, ಹಿರಿಯ ನಾಗರಿಕರು ಇತ್ಯಾದಿಗಳಿಗೆ ಅಸುರಕ್ಷಿತವಾಗಿದ್ದು, ಈ ಪ್ರದೇಶಗಳಲ್ಲಿ ಅಪರಾಧಗಳ ಭಯವಿದೆ. ಸಂಜೆಯ ವೇಳೆ ಚೈನ್ ಸ್ನ್ಯಾಚ್ ಮಾಡುವ ಕೆಲವು ಘಟನೆಗಳು ನಡೆದಿದ್ದು, ಕತ್ತಲೆಯ ಮರೆಯಲ್ಲಿ ಅಪರಾಧಿಗಳು ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ, ತಾವು ಕೂಡಲೇ ಕಾರ್ಯೋನ್ಮುಖರಾಗಿ ಅಗತ್ಯ ಕ್ರಮಗಳನ್ನು ಜರುಗಿಸಿ ಮಂಗಳೂರಿನ ಜನರು ರಸ್ತೆಗಳು ಮತ್ತು ಬೀದಿ ದೀಪಗಳನ್ನು ಉತ್ತಮ ರೀತಿಯಲ್ಲಿ ಉಪಯೋಗಿಸುವಂತೆ ಮಾಡಿಕೊಡಬೇಕು ಎಂದು ಆಮ್‌ ಆದ್ಮಿ ಪಕ್ಷವು ಒತ್ತಾಯಿಸಿದೆ.

Advertisement

ಮನವಿ ನೀಡುವ ವೇಳೆ ಆಮ್‌ ಆದ್ಮಿ ಪಕ್ಷದ  ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಎಎಪಿ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅಶೋಕ್ ಎಡಮಲೆ, ಪಕ್ಷದ  ಪ್ರಮುಖರಾದ ಶಾನನ್ ಪಿಂಟೋ, ಜೆರಾರ್ಡ್ ಟವರ್ಸ್, ಜಯಪ್ರಕಾಶ್ ರಾವ್, ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ನವೀನ್ ಚಂದ್ರ ಪೂಜಾರಿ, ಬೆನೆಟ್ ನವಿತಾ ಕ್ರಾಸ್ತಾ, ರೋನಿ ಕ್ರಾಸ್ತಾ, ಕೆ.ಎನ್.ಶ್ರೀನಿವಾಸ್, ಅವ್ರೆನ್ ಡಿಸೋಜ, ಸಿರಿಲ್ ಜಿವಾನ್, ವಲ್ಸ ಜಿವಾನ್ ಹಾಗೂ ಮತ್ತಿತರ  ಸದಸ್ಯರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

13 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

13 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

18 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

18 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

18 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

20 hours ago