ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿ ಆಗಾಗ ಟ್ರಾಫಿಕ್ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…