Advertisement
ಸುದ್ದಿಗಳು

ಎಎಪಿ ಜಿಲ್ಲಾಧ್ಯಕ್ಷರಿಂದ ಸುಳ್ಯ ತಾಲೂಕು ಭೇಟಿ | ಬಳ್ಪ ಆದರ್ಶ ಗ್ರಾಮದ ಭೋಗಾಯನಕೆರೆ ಅಭಿವೃದ್ಧಿ ಮಾಹಿತಿ ಬಹಿರಂಗಪಡಿಸಲು ಒತ್ತಾಯ | ಜನರ ತೆರಿಗೆ ಹಣ ಪೋಲಾಗದಂತೆ ನಿಗಾ ಇಡುತ್ತೇವೆ – ಎಎಪಿ ಭರವಸೆ |

Share

ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಶುಕ್ರವಾರ ಸುಳ್ಯ ತಾಲೂಕು ಭೇಟಿ ನೀಡಿದರು. ಈ ಸಂದರ್ಭ ತಾಲೂಕಿನ ವಿವಿಧ ಗಣ್ಯರನ್ನು  ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿಯಾದರು.

ಈ ಸಂದರ್ಭ  ರಾಜ್ಯದಲ್ಲಿಯೇ ನಂಬರ್‌ ವನ್‌ ಎನಿಸಿಕೊಂಡ ಆದರ್ಶ ಗ್ರಾಮ ಬಳ್ಪಕ್ಕೆ ಭೇಟಿದಾಗ ಬೋಗಾಯನಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಸಂತೋಷ್‌ ಕಾಮತ್‌ ಅವರು ಬಳ್ಪವು ಆದರ್ಶ ಗ್ರಾಮದಲ್ಲಿ  ನಂಬರ್‌ ವನ್‌ ಎಂದು ಗುರುತಿಸಿಕೊಂಡಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಉತ್ತಮ ಯೋಜನೆ, ಆದರೆ ಇಲ್ಲಿನ ಕಾಮಗಾರಿ ಬಗ್ಗೆ ಅಸಮಾಧಾನವಿದೆ. ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ. ಆದರ್ಶ ಗ್ರಾಮದ ಕೆಲಸಗಳು ಅಚ್ಚುಕಟ್ಟಾಗಿ ನಡೆಯಬೇಕಿತ್ತು. ನಂಬರ್‌ ವನ್‌ ಎಂದು ಗುರುತಿಸಿಕೊಂಡಿದೆ ಕೂಡಾ. ಆದರೆ ಈ ಕಾಮಗಾರಿ ನಡೆಸುವಾಗ ಜನರ ತೆರಿಗೆ ಹಣ ದುಂದುವೆಚ್ಚ ಆಗಿರುವುದು  ಕಂಡುಬರುತ್ತದೆ. ಪ್ಲಾನಿಂಗ್‌ ಇಲ್ಲದೆ ವಿನಿಯೋಗವಾಗುತ್ತಿದೆ. ಕಾಮಗಾರಿ ನಡೆದ ಕೆಲವು ಕಡೆ ಮತ್ತೆ ಕುಸಿತವಾಗಿದೆ. ಅವಶ್ಯಕತೆ ಇಲ್ಲದೆಯೇ ಖರ್ಚಾಗುತ್ತಿದೆಯೇ ಎಂದು ಭಾಸವಾಗುತ್ತಿದೆ.  ಕಾಮಗಾರಿ ಗಮನಿಸಿದರೆ ಮಂಗಳವಾರ ಮಾಡಿದ ಕೆಲಸ ಶುಕ್ರವಾದರವರೆಗೆ ಎಂಬ ಗಾದೆ ಮಾತಿನಂದಿದೆ. ಜಿಲ್ಲೆಯ  ಹಲವು ಕಡೆ ಇಂತಹ ಕೆಲಸ ಇದೆ. ಸರ್ಕಾದ ಇದನ್ನು ಗಂಭೀರವಾಗಿ ಪರಿಗಣಿಸಿಬೇಕು. ಜನರು ಮಾತನಾಡುದವ ಸ್ಥಿತಿಯಲ್ಲಿಲ್ಲ.ಭ್ರಷ್ಟಾಚಾರದ ಕಾಮಗಾರಿ ಎಎಪಿ ಸಹಿಸುವುದಿಲ್ಲ.ಜನರ ಜೊತೆ ನಿಂತು ಹೋರಾಟ ನಡೆಸಲಿದೆ ಎಂದು ಹೇಳಿದರು. ಬೋಗಾಯನಕೆರೆ ಸಹಿತ ದೊಡ್ಡ ಪ್ರಮಾಣದ ಕಾಮಗಾರಿಗಳು ನಡೆಯುವ ವೇಳೆ ಮಾಹಿತಿ ಫಲಕ ಅಳವಡಿಕೆ ಮಾಡಬೇಕು. ಬೋಗಾಯನಕೆರೆಯಲ್ಲೂ ಈ ಫಲಕ ಅಳವಡಿಕೆ ಮಾಡಬೇಕು ಎಂದು ಒತ್ತಾಯಿಸಿದರು.

 

ಸುಳ್ಯ ತಾಲೂಕಿನಲ್ಲಿ ಪಕ್ಷ ಸಂಘಟನೆ ಹಾಗೂ ಜನರ ಜೊತೆ, ಸಮಾಜದ ಗಣ್ಯರ ಜೊತೆ ಮಾತುಕತೆ ನಡೆಸಿ ಪಕ್ಷ ಬೆಳೆಯಬೇಕಾದ ಹೆಜ್ಜೆಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ದೇಶದ ಬಗ್ಗೆ ಕಾಳಜಿಯನ್ನು ಹೊಂದಿ ಕೆಲಸ ಮಾಡಲಾಗುತ್ತಿದೆ. ಗ್ರಾಮೀಣ ಭಾಗಗಳೂ ಬೆಳೆಯಬೇಕು, ಅಭಿವೃದ್ಧಿ ಹೊಂದಬೇಕು. ಜನರ ತೆರಿಗೆ ಹಣ ಸರಿಯಾಗಿ ವಿನಿಯೋಗವಾಗಬೇಕು. ಯಾರದೋ ಖಾಸಗಿ ಸ್ಥಳಗಳಿಗೆ, ಅನಗತ್ಯವಾಗಿರುವ ಕಡೆ ಬಳಕೆಯಾಗಬಾರದು ಎಂಬುದು ನಮ್ಮ ಗುರಿಯಾಗಿದೆ ಎಂದು ಸಂತೋಷ್‌ ಕಾಮತ್‌ ಹೇಳಿದರು.

ಇದೇ ಸಂದರ್ಭ ಈಚೆಗೆ ಪಕ್ಷ ಸೇರ್ಪಡೆಯಾದ ಪ್ರಸನ್ನ ಎಣ್ಮೂರು ಅವರ ಮನೆಗೆ ಭೇಟಿ ನೀಡಿದರು. ವಿವಿಧ ಗಣ್ಯರನ್ನು ಭೇಟಿ ಮಾಡಿದರು. ಸುಳ್ಯದಲ್ಲಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭ ಎಎಪಿ ಉಡುಪಿ-ದಕ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ, ಜಿಲ್ಲಾ ಮುಖಂಡರುಗಳಾದ ಅರವಿಂದ್‌ ಡಿಸೋಜಾ, ಜೆ ಪಿ ರಾವ್‌ , ವೇಣುಗೋಪಾಲ್‌, ಪ್ರಸನ್ನ ಭಟ್ ಎಣ್ಮೂರು  ಹಾಗೂ ಎಎಪಿ ತಾಲೂಕು ಕಾರ್ಯದರ್ಶಿ ಗಣೇಶ್‌ ಪ್ರಸಾದ್‌ ಕಂದಡ್ಕ, ಪ್ರಮುಖರಾದ ಚೇತನ್‌ ದೇವಸ್ಯ, ಕಡಬ, ಮೋಹನ್‌ ದಾಸ ಎಣ್ಣೆಮಜಲು, ಕರುಣಾಕರ ಎಣ್ಣೆಮಜಲು ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago