Advertisement
ಸುದ್ದಿಗಳು

ಎಎಪಿ ಅಧಿಕಾರದಲ್ಲಿ ಜನರ ಹಣ ಯಾರದೋ ಜೇಬಿಗೆ ಹೋಗಲ್ಲ- ನೇರವಾಗಿ ಜನರಿಗೇ ತಲಪುತ್ತದೆ | ಪುತ್ತೂರಿನಲ್ಲಿ ವಿವೇಕಾನಂದ ಸಾಲಿನ್ಸ್‌ |

Share
ಪ್ರತೀ ರಾಜ್ಯದಲ್ಲಿ, ದೇಶದಲ್ಲಿ ಜನಪರವಾದ ಆಡಳಿತ ಅಗತ್ಯವಿದೆ. ಜನರ ತೆರಿಗೆಯ ಹಣ ಯಾರದೋ ಜೇಬಿಗೆ ಪರ್ಸಂಟೇಜ್‌ ಮೂಲಕ ಹೋಗುವುದು ಸಾಧ್ಯವಿಲ್ಲ. ಎಎಪಿ ಅಧಿಕಾರದಲ್ಲಿ ಜನರ ತೆರಿಗೆ ಹಣ ನೇರವಾಗಿ ಜನರಿಗೇ ಅಭಿವೃದ್ಧಿಯ ಮೂಲಕ ಲಭಿಸುತ್ತದೆ ಎಂದು ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ವಿವೇಕಾನಂದ ಸಾಲಿನ್ಸ್‌ ಹೇಳಿದರು.
ಪುತ್ತೂರಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್‌ನಲ್ಲಿ  ಆಮ್‌ ಆದ್ಮಿ ಪಾರ್ಟಿಯ ನೂತನ ಕಚೇರಿ ಉದ್ಘಾಟನೆ ಬಳಿಕ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಎಲ್ಲಾ ಪಕ್ಷಗಳಂತೆಯೇ ಆಡಳಿತ ನಡೆಸುವುದು ಆಮ್‌ ಆದ್ಮಿ ಪಕ್ಷವಲ್ಲ. ಜನರ ತೆರಿಗೆ ಹಣ ಯಾವುದೋ ಪರ್ಸಂಟೇಜ್‌ ರೂಪದಲ್ಲಿ ಯಾರದೋ ಜೇಬಿಗೆ ಹೋಗುವುದು ಸಹಿಸಲು ಸಾಧ್ಯವಿಲ್ಲ. ಎಎಪಿಯು ಜನಪರವಾಗಿ, ಅಭಿವೃದ್ಧಿಯ ರೂಪದಲ್ಲಿ ಜನರಿಗೇ ತೆರಿಗೆ ಹಣವನ್ನು ನೀಡುತ್ತದೆ. ಇದೀಗ ರಾಜ್ಯದಲ್ಲೂ ಆಮ್‌ ಆದ್ಮಿ ಪಕ್ಷವು ಬೆಳೆಯುತ್ತಿದೆ. ಹಂತ ಹಂತವಾಗಿಯೇ ಪಕ್ಷದ ಸಂಘಟನೆಯಾಗುತ್ತಿದೆ. ಆರಂಭದಲ್ಲಿ  ದಿನಗಳಲ್ಲಿ ಆರೋಪಗಳು ಸಹಜವೇ ಇರುತ್ತದೆ. ಆದರೆ ಪಕ್ಷವು ತನ್ನ ಸಿದ್ಧಾಂತಗಳಲ್ಲಿ ರಾಜಿ ಮಾಡುವುದಿಲ್ಲ‌ ಎಂದರು. ಪಕ್ಷವು ತನ್ನ ಕಾರ್ಯಕರ್ತರಿಗೆ ದೇಶಪ್ರೇಮ, ವ್ಯಕ್ತಿಯ ದುಡಿಮೆ ಹಾಗೂ ಆದಾಯ, ಪಕ್ಷಪ್ರೇಮ, ಆರೋಗ್ಯ, ಶಿಕ್ಷಣ, ಉತ್ತಮ ಯೋಜನೆ ಹಾಗೂ ಯೋಚನೆಗಳ ಬಗ್ಗೆ ತಿಳಿಸುತ್ತದೆ. ಈ ಮೂಲಕ ಭ್ರಷ್ಟಾಚಾರ ರಹಿತ ನಾಯಕರುಗಳನ್ನು ಸೃಷ್ಟಿ ಮಾಡುತ್ತಿದೆ ಎಂದರು.
ಆಮ್‌ ಆದ್ಮಿ ಪಕ್ಷದ ದ ಕ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್‌ ಮಾತನಾಡಿ, ಆಮ್‌ ಆದ್ಮಿ ಪಕ್ಷವು ಪ್ರಮುಖವಾಗಿ ಐದು ವಿಚಾರಗಳ ಕಡೆಗೆ ಆದ್ಯತೆ ನೀಡುತ್ತಿದೆ. ದೇಶಪ್ರೇಮ, ಶಿಕ್ಷಣ, ಆರೋಗ್ಯ, ಅಭಿವೃದ್ಧಿ , ಮೂಲಭೂತ ಸೌಕರ್ಯಗಳ ಕಡೆಗೆ ಗಮನಹರಿಸುತ್ತಿದೆ. ಅನೇಕರು ಉಚಿತಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಉಚಿತಗಳ ಬಗ್ಗೆ ಕೆಲವು ಕಡೆ ಅಗತ್ಯ ಇರಬಹುದು, ಆದರೆ ದಕ ಜಿಲ್ಲೆಯಲ್ಲಿ ಅಭಿವೃದ್ಧಿ ಪರವಾಗಿಯೇ ಧ್ವನಿ ಎತ್ತಲಿದ್ದೇವೆ ಎಂದು ಹೇಳಿದರು. ಈಗಾಗಲೇ ದ ಕ ಜಿಲ್ಲೆಯಲ್ಲಿ ಎಎಪಿ ಬೆಳೆಯುತ್ತಿದೆ, ಪುತ್ತೂರಿನಲ್ಲಿಯೂ ಮುಂದಿನ ದಿನಗಳಲ್ಲಿ ಸಶಕ್ತವಾಗಿ ಪಕ್ಷವು ಬೆಳೆಯಲಿದೆ ಎಂದರು.
ಎಎಪಿ ರಾಷ್ಟ್ರೀಯ ಮಂಡಳಿ ಸದಸ್ಯ ಅಶೋಕ್‌ ಎಡಮಲೆ ಮಾತನಾಡಿ, ಆಮ್‌ ಆದ್ಮಿ ಪಕ್ಷವು ಜಾತಿ ಧರ್ಮಗಳ ಯಾವ ಬೇಧವೂ ಇಲ್ಲದೆ, ಬೆಳೆಯುತ್ತಿರುವ ಪಕ್ಷವಾಗಿದೆ. ಅಭಿವೃದ್ಧಿಯೇ ಪ್ರಮುಖ ಅಜೆಂಡಾವಾಗಿದೆ. ಪಕ್ಷವು ಸಾಮಾನ್ಯ ಜನರನ್ನೂ ಗುರುತಿಸಿ ಸ್ಥಾನ ನೀಡುತ್ತದೆ ಎಂದರು.
ಪುತ್ತೂರು ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಡಾ.ವಿಷುಕುಮಾರ್ ಮಾತನಾಡಿ, ಸಮಾಜದಲ್ಲಿ ಬದಲಾವಣೆಗಾಗಿ ಇಂದು ರಾಜಕೀಯ ಅಗತ್ಯವಿದೆ. ಸಮಾಜವು ಭ್ರಷ್ಟಾಚಾರ ಮುಕ್ತವಾಗಬೇಕು, ಪರಿಶುದ್ಧ ರಾಜಕಾರಣ ಅಗತ್ಯವಿದೆ, ಅಭಿವೃದ್ಧಿಯಾಗ ಕಲ್ಪನೆಗಳ ಅಗತ್ಯವಿದೆ ಎಂದರು. ದೇಶಪ್ರೇಮ ಹೊಂದಿರುವ ಅಧಿಕಾರಿಯೊಬ್ಬರು ರಾಜಕೀಯಕ್ಕೆ ಬಂದರೆ ಅಭಿವೃದ್ಧಿ ಸಾಧ್ಯವಿದೆ ಎಂಬುದನ್ನು ಅರವಿಂದ ಕೇಜ್ರೀವಾಲ್‌ ತೋರಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ  ಎಎಪಿ ಜಿಲ್ಲಾಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ  ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಪ್ರಸ್ತಾವನೆಗೈದರು. ಸಂಘಟನಾ ಉಸ್ತುವಾರಿ ಜನಾರ್ಧನ ಬಂಗೇರ ಸ್ವಾಗತಿಸಿದರು.ಆಮ್ ಆದ್ಮಿ ಪಾರ್ಟಿ ಅಲ್ಪಸಂಖ್ಯಾತ ಮೋರ್ಛಾ ಅಧ್ಯಕ್ಷ ಮಹಮ್ಮದ್ ಆಲಿ ವಂದಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

12 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

23 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago