ಸುದ್ದಿಗಳು

ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಮೋಜು | ಆಮ್‌ ಆದ್ಮಿ ಪಾರ್ಟಿ ಗಂಭೀರ ಆರೋಪ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರು ಸಹಕಾರಿ ಸಂಘದ ಆಡಳಿತವು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸದ ಮೋಜಿನ ಪ್ರವಾಸ  ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪಿಸಿದ್ದಾರೆ.

Advertisement

ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ಕಡಬ ತಾಲೂಕಿನ ಆಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು‌ ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸ ಹೋಗಿದ್ದಾರೆ. ಇದು ಸರಿಯಲ್ಲ. ಸಹಕಾರಿ ಸಂಘದ ಸದಸ್ಯರ ಹಣದಲ್ಲಿ ಇಂತಹ ಪ್ರವಾಸ ಸರಿಯಲ್ಲ. ಪ್ರವಾಸದಲ್ಲಿ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ‌ ಕುಟುಂಬ‌ಸದ ಸದಸ್ಯರನ್ನೂ ಕರೆದೊಯ್ಯಲಾಗಿದೆ.  ಪ್ರವಾಸದ‌ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು‌ ಪ್ರವಾಸಿ ತಾಣಗಳನ್ನು ಮಾತ್ರ ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

Advertisement

ಸಹಕಾರಿ ಸಂಘದ ವತಿಯಿಂದ ಕೃಷಿ ಕ್ಷೇತ್ರಗಳಿಗೆ, ಕೃಷಿಗೆ ಸಂಬಂಧಿತ ಚಟುವಟಿಕೆಗಳಿಗೆ, ಕೃಷಿಕರಿಗೆ, ಆ ಸಹಕಾರಿ ಸಂಘದ ಸದಸ್ಯರಿಗೆ ಅನುಕೂಲವಾಗುವ ಪ್ರವಾಸ ನಡೆಸಬೇಕೇ ಹೊರತು ಮೋಜಿನ ಪ್ರವಾಸ ಸಲ್ಲದು. ಸಹಕಾರಿ ಸಂಘದಲ್ಲಿ ರೈತರ ಹಣ ದುರುಪಯೋಗವಾಗುವುದು ಸಹಿಸಲಾಗದು ಎಂದು ಆಲಂಕಾರು ನಿವಾಸಿ , ಆಮ್‌ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ  ಜನಾರ್ಧನ ಬಂಗೇರ ಆರೋಪಿಸಿದರು. ಅನೇಕ ಸಹಕಾರಿ ಸಂಘಗಳು ಯಶಸ್ವಿಯಾಗಿ ಮುನ್ನಡೆದ ಉದಾಹರಣೆ ಇದೆ. ಅಂತಹ ಸಹಕಾರಿ ಸಂಘಗಳ ಅಧ್ಯಯನದ ಬಳಿಕ ಅನುಷ್ಟಾನಕ್ಕೆ ಪ್ರಯತ್ನಿಸಬೇಕು ಎಂದು ಜನಾರ್ಧನ ಬಂಗೇರ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ತಾಲೂಕು ಅಧ್ಯಕ್ಷ ಡಾ.ವಿಷು ಕುಮಾರ್‌ ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

6 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

14 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

14 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

14 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

15 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

15 hours ago