Advertisement
ಸುದ್ದಿಗಳು

ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಮೋಜು | ಆಮ್‌ ಆದ್ಮಿ ಪಾರ್ಟಿ ಗಂಭೀರ ಆರೋಪ |

Share

ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರು ಸಹಕಾರಿ ಸಂಘದ ಆಡಳಿತವು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸದ ಮೋಜಿನ ಪ್ರವಾಸ  ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪಿಸಿದ್ದಾರೆ.

Advertisement

ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ಕಡಬ ತಾಲೂಕಿನ ಆಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು‌ ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸ ಹೋಗಿದ್ದಾರೆ. ಇದು ಸರಿಯಲ್ಲ. ಸಹಕಾರಿ ಸಂಘದ ಸದಸ್ಯರ ಹಣದಲ್ಲಿ ಇಂತಹ ಪ್ರವಾಸ ಸರಿಯಲ್ಲ. ಪ್ರವಾಸದಲ್ಲಿ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ‌ ಕುಟುಂಬ‌ಸದ ಸದಸ್ಯರನ್ನೂ ಕರೆದೊಯ್ಯಲಾಗಿದೆ.  ಪ್ರವಾಸದ‌ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು‌ ಪ್ರವಾಸಿ ತಾಣಗಳನ್ನು ಮಾತ್ರ ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

Advertisement

ಸಹಕಾರಿ ಸಂಘದ ವತಿಯಿಂದ ಕೃಷಿ ಕ್ಷೇತ್ರಗಳಿಗೆ, ಕೃಷಿಗೆ ಸಂಬಂಧಿತ ಚಟುವಟಿಕೆಗಳಿಗೆ, ಕೃಷಿಕರಿಗೆ, ಆ ಸಹಕಾರಿ ಸಂಘದ ಸದಸ್ಯರಿಗೆ ಅನುಕೂಲವಾಗುವ ಪ್ರವಾಸ ನಡೆಸಬೇಕೇ ಹೊರತು ಮೋಜಿನ ಪ್ರವಾಸ ಸಲ್ಲದು. ಸಹಕಾರಿ ಸಂಘದಲ್ಲಿ ರೈತರ ಹಣ ದುರುಪಯೋಗವಾಗುವುದು ಸಹಿಸಲಾಗದು ಎಂದು ಆಲಂಕಾರು ನಿವಾಸಿ , ಆಮ್‌ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ  ಜನಾರ್ಧನ ಬಂಗೇರ ಆರೋಪಿಸಿದರು. ಅನೇಕ ಸಹಕಾರಿ ಸಂಘಗಳು ಯಶಸ್ವಿಯಾಗಿ ಮುನ್ನಡೆದ ಉದಾಹರಣೆ ಇದೆ. ಅಂತಹ ಸಹಕಾರಿ ಸಂಘಗಳ ಅಧ್ಯಯನದ ಬಳಿಕ ಅನುಷ್ಟಾನಕ್ಕೆ ಪ್ರಯತ್ನಿಸಬೇಕು ಎಂದು ಜನಾರ್ಧನ ಬಂಗೇರ ಹೇಳಿದರು.

Advertisement

ಸುದ್ದಿಗೋಷ್ಟಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ತಾಲೂಕು ಅಧ್ಯಕ್ಷ ಡಾ.ವಿಷು ಕುಮಾರ್‌ ಉಪಸ್ಥಿತರಿದ್ದರು.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago