Advertisement
ಸುದ್ದಿಗಳು

ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಮೋಜು | ಆಮ್‌ ಆದ್ಮಿ ಪಾರ್ಟಿ ಗಂಭೀರ ಆರೋಪ |

Share

ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರು ಸಹಕಾರಿ ಸಂಘದ ಆಡಳಿತವು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸದ ಮೋಜಿನ ಪ್ರವಾಸ  ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪಿಸಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ಕಡಬ ತಾಲೂಕಿನ ಆಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು‌ ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸ ಹೋಗಿದ್ದಾರೆ. ಇದು ಸರಿಯಲ್ಲ. ಸಹಕಾರಿ ಸಂಘದ ಸದಸ್ಯರ ಹಣದಲ್ಲಿ ಇಂತಹ ಪ್ರವಾಸ ಸರಿಯಲ್ಲ. ಪ್ರವಾಸದಲ್ಲಿ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ‌ ಕುಟುಂಬ‌ಸದ ಸದಸ್ಯರನ್ನೂ ಕರೆದೊಯ್ಯಲಾಗಿದೆ.  ಪ್ರವಾಸದ‌ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು‌ ಪ್ರವಾಸಿ ತಾಣಗಳನ್ನು ಮಾತ್ರ ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

ಸಹಕಾರಿ ಸಂಘದ ವತಿಯಿಂದ ಕೃಷಿ ಕ್ಷೇತ್ರಗಳಿಗೆ, ಕೃಷಿಗೆ ಸಂಬಂಧಿತ ಚಟುವಟಿಕೆಗಳಿಗೆ, ಕೃಷಿಕರಿಗೆ, ಆ ಸಹಕಾರಿ ಸಂಘದ ಸದಸ್ಯರಿಗೆ ಅನುಕೂಲವಾಗುವ ಪ್ರವಾಸ ನಡೆಸಬೇಕೇ ಹೊರತು ಮೋಜಿನ ಪ್ರವಾಸ ಸಲ್ಲದು. ಸಹಕಾರಿ ಸಂಘದಲ್ಲಿ ರೈತರ ಹಣ ದುರುಪಯೋಗವಾಗುವುದು ಸಹಿಸಲಾಗದು ಎಂದು ಆಲಂಕಾರು ನಿವಾಸಿ , ಆಮ್‌ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ  ಜನಾರ್ಧನ ಬಂಗೇರ ಆರೋಪಿಸಿದರು. ಅನೇಕ ಸಹಕಾರಿ ಸಂಘಗಳು ಯಶಸ್ವಿಯಾಗಿ ಮುನ್ನಡೆದ ಉದಾಹರಣೆ ಇದೆ. ಅಂತಹ ಸಹಕಾರಿ ಸಂಘಗಳ ಅಧ್ಯಯನದ ಬಳಿಕ ಅನುಷ್ಟಾನಕ್ಕೆ ಪ್ರಯತ್ನಿಸಬೇಕು ಎಂದು ಜನಾರ್ಧನ ಬಂಗೇರ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ತಾಲೂಕು ಅಧ್ಯಕ್ಷ ಡಾ.ವಿಷು ಕುಮಾರ್‌ ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

5 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

12 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago