ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…