ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…