ಸುಳ್ಯದಲ್ಲಿ ಆಮ್‌ ಆದ್ಮಿ ಪಕ್ಷದಿಂದ ಪ್ರಚಾರ ಆರಂಭ | ಸುಳ್ಯ ಶಾಸಕರ ವಾರ್ಡಿನಿಂದಲೇ ಪ್ರಚಾರ ಆರಂಭಿಸಿದ ಎಎಪಿ | ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿ ನಡಿಗೆ |

January 17, 2023
9:47 PM

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್ ಹಾಗೂ ಪಕ್ಷದ ಮುಖಂಡರು ಮಂಗಳವಾರ ಗುರುಪ್ರಸಾದ್ ಮೇರ್ಕಜೆ ನೇತೃತ್ವದಲ್ಲಿ, ಅಮರಮೂಡ್ನೂರು ಗ್ರಾಮದ  ಮುಂಡಕಜೆ ವಾರ್ಡ್ ನಿಂದ ಪ್ರಚಾರ ಅಭಿಯಾನ ಹಾಗೂ ಅಧ್ಯಯನ ಪ್ರವಾಸ ಆರಂಭಿಸಿದೆ. 

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿಕೊಂಡು ಆಮ್‌ ಆದ್ಮಿ ಪಕ್ಷವು ಹೆಜ್ಜೆ ಹಾಕಿದೆ. ಸುಳ್ಯದ ಗ್ರಾಮೀಣ ಭಾಗಗಳು ಹಾಗೂ ನಗರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ಹಾಕಿಕೊಂಡಿದೆ. ಇದರ ಜೊತೆಗೆ ಗ್ರಾಮೀಣ ಭಾಗದ ಸಂಪರ್ಕ ನಡೆಸಿ ಸಮಸ್ಯೆಗಳ ಬಗ್ಗೆ ಅಧ್ಯಯನ ಹಾಗೂ ಪರಿಹಾರದ ಬಗ್ಗೆ ಗ್ರಾಮಸ್ಥರ ಜೊತೆಗೆ ಸಭೆ ನಡೆಸುತ್ತಿದೆ. ಇದರ ಮೊದಲ ಭಾಗವಾಗಿ ಸುಳ್ಯ ಶಾಸಕರ ವಾರ್ಡ್‌ ನಿಂದಲೇ ಸಭೆ ಆರಂಭಿಸಿದೆ. ಪರಿಶಿಷ್ಟ ವರ್ಗದ ನಿವಾಸಿಗಳ ಮುಂಡಕಜೆ ವಾರ್ಡಿನಲ್ಲಿ ಎರಡು ಮೂರು ದಶಕದಿಂದ ರಸ್ತೆಯ ನಿರ್ಲಕ್ಷ್ಯ, ಮನೆ ನಿವೇಶನ ದಾಖಲಾತಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಇತ್ಯಾದಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಅಲ್ಲಿನ ನಾಗರಿಕರೊಂದಿಗೆ ವಿಸ್ತಾರವಾದ ವಿಚಾರ ವಿಮರ್ಶೆ ನಡೆಸಿತು.

ಸ್ಥಳೀಯ ‌ನಾಯಕರಾದ ಸುರೇಶ್ ಮುಂಡಕಜೆ ನೇತೃತ್ವದಲ್ಲಿ ಅನೇಕರು ಪಕ್ಷ ಸೇರ್ಪಡೆಗೊಂಡು, ಬದಲಾವಣೆಯ ಜನಸಾಮಾನ್ಯರ ಹೊಸ ರಾಜಕಾರಣವನ್ನು ಭದ್ರಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಪಕ್ಷದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡಿದರು. ಎಎಪಿ ಮುಖಂಡರಾದ ರಶೀದ್ ಜಟ್ಟಿಪಳ್ಳ ಸ್ವಾಗತಿಸಿದರು. ‌ ಈ ಸಂದರ್ಭದಲ್ಲಿ ಗ್ರಾಮ ಸಂಪರ್ಕ ಅಭಿಯಾನದ ಸಂಯೋಜಕ ಗಣೇಶ್ ಪ್ರಸಾದ್ ಕಂದಡ್ಕ, ರಾಮಕೃಷ್ಣ ಬೀರಮಂಗಲ, ಯಶವಂತ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror