Advertisement
ಸುದ್ದಿಗಳು

ಸುಳ್ಯದಲ್ಲಿ ಆಮ್‌ ಆದ್ಮಿ ಪಕ್ಷದಿಂದ ಪ್ರಚಾರ ಆರಂಭ | ಸುಳ್ಯ ಶಾಸಕರ ವಾರ್ಡಿನಿಂದಲೇ ಪ್ರಚಾರ ಆರಂಭಿಸಿದ ಎಎಪಿ | ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿ ನಡಿಗೆ |

Share

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್ ಹಾಗೂ ಪಕ್ಷದ ಮುಖಂಡರು ಮಂಗಳವಾರ ಗುರುಪ್ರಸಾದ್ ಮೇರ್ಕಜೆ ನೇತೃತ್ವದಲ್ಲಿ, ಅಮರಮೂಡ್ನೂರು ಗ್ರಾಮದ  ಮುಂಡಕಜೆ ವಾರ್ಡ್ ನಿಂದ ಪ್ರಚಾರ ಅಭಿಯಾನ ಹಾಗೂ ಅಧ್ಯಯನ ಪ್ರವಾಸ ಆರಂಭಿಸಿದೆ. 

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿಕೊಂಡು ಆಮ್‌ ಆದ್ಮಿ ಪಕ್ಷವು ಹೆಜ್ಜೆ ಹಾಕಿದೆ. ಸುಳ್ಯದ ಗ್ರಾಮೀಣ ಭಾಗಗಳು ಹಾಗೂ ನಗರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ಹಾಕಿಕೊಂಡಿದೆ. ಇದರ ಜೊತೆಗೆ ಗ್ರಾಮೀಣ ಭಾಗದ ಸಂಪರ್ಕ ನಡೆಸಿ ಸಮಸ್ಯೆಗಳ ಬಗ್ಗೆ ಅಧ್ಯಯನ ಹಾಗೂ ಪರಿಹಾರದ ಬಗ್ಗೆ ಗ್ರಾಮಸ್ಥರ ಜೊತೆಗೆ ಸಭೆ ನಡೆಸುತ್ತಿದೆ. ಇದರ ಮೊದಲ ಭಾಗವಾಗಿ ಸುಳ್ಯ ಶಾಸಕರ ವಾರ್ಡ್‌ ನಿಂದಲೇ ಸಭೆ ಆರಂಭಿಸಿದೆ. ಪರಿಶಿಷ್ಟ ವರ್ಗದ ನಿವಾಸಿಗಳ ಮುಂಡಕಜೆ ವಾರ್ಡಿನಲ್ಲಿ ಎರಡು ಮೂರು ದಶಕದಿಂದ ರಸ್ತೆಯ ನಿರ್ಲಕ್ಷ್ಯ, ಮನೆ ನಿವೇಶನ ದಾಖಲಾತಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಇತ್ಯಾದಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಅಲ್ಲಿನ ನಾಗರಿಕರೊಂದಿಗೆ ವಿಸ್ತಾರವಾದ ವಿಚಾರ ವಿಮರ್ಶೆ ನಡೆಸಿತು.

ಸ್ಥಳೀಯ ‌ನಾಯಕರಾದ ಸುರೇಶ್ ಮುಂಡಕಜೆ ನೇತೃತ್ವದಲ್ಲಿ ಅನೇಕರು ಪಕ್ಷ ಸೇರ್ಪಡೆಗೊಂಡು, ಬದಲಾವಣೆಯ ಜನಸಾಮಾನ್ಯರ ಹೊಸ ರಾಜಕಾರಣವನ್ನು ಭದ್ರಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಪಕ್ಷದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡಿದರು. ಎಎಪಿ ಮುಖಂಡರಾದ ರಶೀದ್ ಜಟ್ಟಿಪಳ್ಳ ಸ್ವಾಗತಿಸಿದರು. ‌ ಈ ಸಂದರ್ಭದಲ್ಲಿ ಗ್ರಾಮ ಸಂಪರ್ಕ ಅಭಿಯಾನದ ಸಂಯೋಜಕ ಗಣೇಶ್ ಪ್ರಸಾದ್ ಕಂದಡ್ಕ, ರಾಮಕೃಷ್ಣ ಬೀರಮಂಗಲ, ಯಶವಂತ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

13 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

13 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

15 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

15 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago