Advertisement
ಸುದ್ದಿಗಳು

ಸುಳ್ಯದಲ್ಲಿ ಆಮ್‌ ಆದ್ಮಿ ಪಕ್ಷದಿಂದ ಪ್ರಚಾರ ಆರಂಭ | ಸುಳ್ಯ ಶಾಸಕರ ವಾರ್ಡಿನಿಂದಲೇ ಪ್ರಚಾರ ಆರಂಭಿಸಿದ ಎಎಪಿ | ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿ ನಡಿಗೆ |

Share

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್ ಹಾಗೂ ಪಕ್ಷದ ಮುಖಂಡರು ಮಂಗಳವಾರ ಗುರುಪ್ರಸಾದ್ ಮೇರ್ಕಜೆ ನೇತೃತ್ವದಲ್ಲಿ, ಅಮರಮೂಡ್ನೂರು ಗ್ರಾಮದ  ಮುಂಡಕಜೆ ವಾರ್ಡ್ ನಿಂದ ಪ್ರಚಾರ ಅಭಿಯಾನ ಹಾಗೂ ಅಧ್ಯಯನ ಪ್ರವಾಸ ಆರಂಭಿಸಿದೆ. 

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿಕೊಂಡು ಆಮ್‌ ಆದ್ಮಿ ಪಕ್ಷವು ಹೆಜ್ಜೆ ಹಾಕಿದೆ. ಸುಳ್ಯದ ಗ್ರಾಮೀಣ ಭಾಗಗಳು ಹಾಗೂ ನಗರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ಹಾಕಿಕೊಂಡಿದೆ. ಇದರ ಜೊತೆಗೆ ಗ್ರಾಮೀಣ ಭಾಗದ ಸಂಪರ್ಕ ನಡೆಸಿ ಸಮಸ್ಯೆಗಳ ಬಗ್ಗೆ ಅಧ್ಯಯನ ಹಾಗೂ ಪರಿಹಾರದ ಬಗ್ಗೆ ಗ್ರಾಮಸ್ಥರ ಜೊತೆಗೆ ಸಭೆ ನಡೆಸುತ್ತಿದೆ. ಇದರ ಮೊದಲ ಭಾಗವಾಗಿ ಸುಳ್ಯ ಶಾಸಕರ ವಾರ್ಡ್‌ ನಿಂದಲೇ ಸಭೆ ಆರಂಭಿಸಿದೆ. ಪರಿಶಿಷ್ಟ ವರ್ಗದ ನಿವಾಸಿಗಳ ಮುಂಡಕಜೆ ವಾರ್ಡಿನಲ್ಲಿ ಎರಡು ಮೂರು ದಶಕದಿಂದ ರಸ್ತೆಯ ನಿರ್ಲಕ್ಷ್ಯ, ಮನೆ ನಿವೇಶನ ದಾಖಲಾತಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಇತ್ಯಾದಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಅಲ್ಲಿನ ನಾಗರಿಕರೊಂದಿಗೆ ವಿಸ್ತಾರವಾದ ವಿಚಾರ ವಿಮರ್ಶೆ ನಡೆಸಿತು.

ಸ್ಥಳೀಯ ‌ನಾಯಕರಾದ ಸುರೇಶ್ ಮುಂಡಕಜೆ ನೇತೃತ್ವದಲ್ಲಿ ಅನೇಕರು ಪಕ್ಷ ಸೇರ್ಪಡೆಗೊಂಡು, ಬದಲಾವಣೆಯ ಜನಸಾಮಾನ್ಯರ ಹೊಸ ರಾಜಕಾರಣವನ್ನು ಭದ್ರಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಪಕ್ಷದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡಿದರು. ಎಎಪಿ ಮುಖಂಡರಾದ ರಶೀದ್ ಜಟ್ಟಿಪಳ್ಳ ಸ್ವಾಗತಿಸಿದರು. ‌ ಈ ಸಂದರ್ಭದಲ್ಲಿ ಗ್ರಾಮ ಸಂಪರ್ಕ ಅಭಿಯಾನದ ಸಂಯೋಜಕ ಗಣೇಶ್ ಪ್ರಸಾದ್ ಕಂದಡ್ಕ, ರಾಮಕೃಷ್ಣ ಬೀರಮಂಗಲ, ಯಶವಂತ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago