Advertisement
ಸುದ್ದಿಗಳು

ಸುಳ್ಯದಲ್ಲಿ ಆಮ್‌ ಆದ್ಮಿ ಪಕ್ಷದಿಂದ ಪ್ರಚಾರ ಆರಂಭ | ಸುಳ್ಯ ಶಾಸಕರ ವಾರ್ಡಿನಿಂದಲೇ ಪ್ರಚಾರ ಆರಂಭಿಸಿದ ಎಎಪಿ | ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿ ನಡಿಗೆ |

Share

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್ ಹಾಗೂ ಪಕ್ಷದ ಮುಖಂಡರು ಮಂಗಳವಾರ ಗುರುಪ್ರಸಾದ್ ಮೇರ್ಕಜೆ ನೇತೃತ್ವದಲ್ಲಿ, ಅಮರಮೂಡ್ನೂರು ಗ್ರಾಮದ  ಮುಂಡಕಜೆ ವಾರ್ಡ್ ನಿಂದ ಪ್ರಚಾರ ಅಭಿಯಾನ ಹಾಗೂ ಅಧ್ಯಯನ ಪ್ರವಾಸ ಆರಂಭಿಸಿದೆ. 

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಗುರಿ ಇರಿಸಿಕೊಂಡು ಆಮ್‌ ಆದ್ಮಿ ಪಕ್ಷವು ಹೆಜ್ಜೆ ಹಾಕಿದೆ. ಸುಳ್ಯದ ಗ್ರಾಮೀಣ ಭಾಗಗಳು ಹಾಗೂ ನಗರ ಪ್ರದೇಶದ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ಹಾಕಿಕೊಂಡಿದೆ. ಇದರ ಜೊತೆಗೆ ಗ್ರಾಮೀಣ ಭಾಗದ ಸಂಪರ್ಕ ನಡೆಸಿ ಸಮಸ್ಯೆಗಳ ಬಗ್ಗೆ ಅಧ್ಯಯನ ಹಾಗೂ ಪರಿಹಾರದ ಬಗ್ಗೆ ಗ್ರಾಮಸ್ಥರ ಜೊತೆಗೆ ಸಭೆ ನಡೆಸುತ್ತಿದೆ. ಇದರ ಮೊದಲ ಭಾಗವಾಗಿ ಸುಳ್ಯ ಶಾಸಕರ ವಾರ್ಡ್‌ ನಿಂದಲೇ ಸಭೆ ಆರಂಭಿಸಿದೆ. ಪರಿಶಿಷ್ಟ ವರ್ಗದ ನಿವಾಸಿಗಳ ಮುಂಡಕಜೆ ವಾರ್ಡಿನಲ್ಲಿ ಎರಡು ಮೂರು ದಶಕದಿಂದ ರಸ್ತೆಯ ನಿರ್ಲಕ್ಷ್ಯ, ಮನೆ ನಿವೇಶನ ದಾಖಲಾತಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಇತ್ಯಾದಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಅಲ್ಲಿನ ನಾಗರಿಕರೊಂದಿಗೆ ವಿಸ್ತಾರವಾದ ವಿಚಾರ ವಿಮರ್ಶೆ ನಡೆಸಿತು.

ಸ್ಥಳೀಯ ‌ನಾಯಕರಾದ ಸುರೇಶ್ ಮುಂಡಕಜೆ ನೇತೃತ್ವದಲ್ಲಿ ಅನೇಕರು ಪಕ್ಷ ಸೇರ್ಪಡೆಗೊಂಡು, ಬದಲಾವಣೆಯ ಜನಸಾಮಾನ್ಯರ ಹೊಸ ರಾಜಕಾರಣವನ್ನು ಭದ್ರಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಪಕ್ಷದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮಾತನಾಡಿದರು. ಎಎಪಿ ಮುಖಂಡರಾದ ರಶೀದ್ ಜಟ್ಟಿಪಳ್ಳ ಸ್ವಾಗತಿಸಿದರು. ‌ ಈ ಸಂದರ್ಭದಲ್ಲಿ ಗ್ರಾಮ ಸಂಪರ್ಕ ಅಭಿಯಾನದ ಸಂಯೋಜಕ ಗಣೇಶ್ ಪ್ರಸಾದ್ ಕಂದಡ್ಕ, ರಾಮಕೃಷ್ಣ ಬೀರಮಂಗಲ, ಯಶವಂತ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

6 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

10 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

10 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

20 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago