ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿ ಪ್ರಚಾರ ಕಾರ್ಯ ನಡೆಸುತ್ತಿದೆ. ಈ ಸಂದರ್ಭ ನೆಲ್ಯಾಡಿ ಪ್ರದೇಶದ ಐವರು ಮಾಜಿ ಗ್ರಾಪಂ ಸದಸ್ಯರು ಎಎಪಿಗೆ ಸೇರ್ಪಡೆಯಾದರು.
ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಅಭಿಯಾನವು ನೆಲ್ಯಾಡಿ ಬ್ಲಾಕ್ ಮುಖಂಡ ಪ್ರತಾಪ್ ಚಂದ್ರ ರೈ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಐವರು ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಪ್ರಮುಖರ ಭೇಟಿ ಹಾಗೂ ಸೇರ್ಪಡೆ ನಡೆಸಿದರು.ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಎಎಪಿ ಪ್ರಚಾರ ಕಾರ್ಯ ನಡೆಸುತ್ತಿದ್ದು ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಗ್ರಾಮೀಣ ರಸ್ತೆ ಸೇರಿದಂತೆ ಅಭಿವೃದ್ಧಿ ಪರವಾದ ಯೋಜನೆಗಳೊಂದಿಗೆ ಪ್ರಚಾರ ಕಾರ್ಯ ನಡೆಸುತ್ತಿದೆ.
ಈ ಸಂದರ್ಭ ಸುಳ್ಯ ವಿಧಾನಸಭಾ ಕ್ಷೇತ್ರದ ಸೇವಾ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ಎಎಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಎಡಮಲೆ, ಆನಂದ ರಾಮಕುಂಜ, ಕಲಂದರ್ ಎಲಿಮಲೆ, ಸಂಶುದ್ದಿನ್ ಕೆ ಎಂ ಮೊದಲಾದವರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…