ಆಮ್ ಆದ್ಮಿ ಪಾರ್ಟಿ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದೆ : ಅಶೋಕ್ ಎಡಮಲೆ

May 6, 2023
7:12 PM

ವಿರೋಧ ಪಕ್ಷಗಳು ನಿಷ್ಕ್ರೀಯವಾಗಿದ್ದು ಆಮ್ ಆದ್ಮಿ ಪಕ್ಷ ಇತ್ತೀಚೆಗೆ ಪ್ರಭಲ ಪ್ರತಿಪಕ್ಷವಾಗಿ ಮುನ್ನುಗ್ಗುತ್ತಿದ್ದು ಜನರು ಆಮ್ ಆದ್ಮಿ ಪಕ್ಷದ ಅಭಿವೃದ್ದಿಪರ ಚಿಂತನೆಯ ಆಡಳಿತವನ್ನು ಮೆಚ್ಚಿಕೊಂಡಿದ್ದು, ರಾಷ್ಟ್ರೀಯ ಪಕ್ಷಗಳ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ, ಈ ಬಾರಿಯ ಚುನಾವಣೆಯಲ್ಲಿ ಗೆದ್ದರೂ ಸೋತರೂ ಸದಾ ಜನ ಸಾಮಾನ್ಯರೊಂದಿಗೆ ಬೆರೆತು ಜನರ ಎಲ್ಲಾತರದ ಕಷ್ಟಗಳಿಗೆ ಆಮ್ ಆದ್ಮಿ ಪಕ್ಷ ಸ್ಪಂದಿಸಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ಹೇಳಿದ್ದಾರೆ.

Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು ಅಭಿವೃದ್ದಿಯಲ್ಲಿ ಮುನ್ನುಗ್ಗುತ್ತಿರುವ ದೆಹಲಿ ಮತ್ತು ಪಂಜಾಬ್ ಇದಕ್ಕೆ ಮಾದರಿಯಾಗಿದ್ದು, ಕರ್ನಾಟಕದಲ್ಲೂ ರಾಜ್ಯದ ಅಭಿವೃದ್ದಿ , ಜನಸಾಮಾನ್ಯರಿಗೆ ಸುಲಲಿತ ಸರ್ವಿಸ್ ಗಳಿಗೆ ಆಮ್ ಆದ್ಮಿ ಪಕ್ಷ ಅದಿಕಾರಕ್ಕೆ ಬರುವುದು ಅನಿವಾರ್ಯವಾಗಿದೆ ಎಂದು ಹೇಳಿದರು. ಸುಳ್ಯದ ಕೃಷಿಕರನ್ನು ಬಾಧಿಸುತ್ತಿರುವ ಅಡಿಕೆ ಎಲೆ ಹಳದಿ
ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಹಾಗೂ ಸುಳ್ಯದ 110 ಕೆ.ವಿ. ವಿದ್ಯುತ್ ಸಬ್‌ಸ್ಟೇಶನ್ ಕಾಮಗಾರಿ
ಮಾಡಿಸುವ ನಿಟ್ಟಿನಲ್ಲಿ ಎ.ಎ.ಪಿ ಬದ್ಧವಾಗಿದ್ದು, ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾದರೆ ಮೊದಲ ಕೆಲಸವಾಗಿ ಇದನ್ನೇ ಮಾಡುತ್ತೇವೆ. ಇದಕ್ಕಾಗಿ ಯಾವ ಹೋರಾಟಕ್ಕೂ ನಾವು ಬದ್ಧರಾಗಿದ್ದು ಆ ಕೆಲಸವನ್ನು ಮಾಡಿಯೇ ಮಾಡುತ್ತೇವೆ ಎಎಪಿ ಕರ್ನಾಟಕದಲ್ಲಿ ಕೆಲವು ಗ್ಯಾರಂಟಿಗಳನ್ನು ಪ್ರಣಾಳಿಕೆಯಲ್ಲಿ ಹಾಕಿಕೊಂಡಿದ್ದು ಅಧಿಕಾರಕ್ಕೆ ಬಂದ ತಕ್ಷಣ ಹಂತ ಹಂತವಾಗಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಮಾತನಾಡಿ ನಾನು ಗ್ರಾಮೀಣ ಭಾಗದಲ್ಲಿ ಸುತ್ತಿದ್ದೇನೆ. ನನ್ನ ತಂದೆಯವರು ಶಾಸಕರಾಗಿದ್ದ ಸಂದರ್ಭದಲ್ಲಿ ಆದ ಕೆಲಸವನ್ನು ಜನರು ಈಗಲೂ ನೆನಪಿಸುತ್ತಿದ್ದಾರೆ. ಆದರೆ ಆ ಬಳಿಕದಲ್ಲಿ ಏನು ಕೆಲಸಗಳಾಗಿಲ್ಲ. ಈಗಲೂ ಕೆಲವು ಮನೆಗಳು ಸೀರೆಯ ಗೋಡೆ ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ . ಕೆಲವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ರಸ್ತೆ ಸೇತುವೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಸುಳ್ಯ ಮೀಸಲು ಕ್ಷೇತ್ರ. ಹಾಗಾಗಿ ಅಭಿವೃದ್ದಿಗೆ ಇಲ್ಲಿಗೆ ಹೆಚ್ಚು ಅನುದಾನ ಬರಬೇಕು. ಆದರೆ ಇಲ್ಲಿಯವರು ಅನುದಾನ ತರುವಲ್ಲಿ ಪ್ರಯತ್ನಿಸಲೇ ಇಲ್ಲ ಚುನಾವಣಾ ಪ್ರಚಾರದಲ್ಲಿ ತೊಡಗುತ್ತಾ ತೊಡಗುತ್ತಾ ಇಲ್ಲಿಯ ಅಭಿವೃದ್ದಿಗಾಗಿ, ಜನರ ಕಷ್ಟಗಳಿಗೆ ಸ್ಪಂದನೆಗಾಗಿ ನಿರಂತರ ಜನ ಸಂಪರ್ಕದ ಕಾರ್ಯದಲ್ಲಿ ತೊಡಗಲು ಆಸಕ್ತಿ ಬೆಳೆದಿದೆ ಎಂದು ಹೇಳಿದರು.

ಚುನಾವಣಾ ಪ್ರಚಾರ ಉಸ್ತುವಾರಿ ಖಲಂದರ್ ಎಲಿಮಲೆ ಮಾತನಾಡಿ,ಎಲ್ಲಾ ಕಾನೂನು ಬದ್ದವಾಗಿ ಪ್ರಚಾರ ಕಾರ್ಯ ನಡೆಯುತ್ತಿದೆ ಈ ಬಾರಿ ಸುಳ್ಯದಲ್ಲಿ ಜನರು ಎಎಪಿಯನ್ನು ಮೆಚ್ಚಿಕೊಂಡಿದ್ದಾರೆ. ಪ್ರಚಾರದ ವೇಳೆ ಉತ್ತಮ ಪ್ರತಿಕ್ರಿಯೆ ಇದೆ . ಜನರಿಗೆ ಬೇರೆ ಪಕ್ಷದ ಜೊತೆ ಗುರುತಿಸಿಕೊಳ್ಳಲು ಭಯಪಡುವ ವಾತಾವರಣ ರಾಷ್ಟ್ರೀಯ ಪಕ್ಷಗಳು ಮಾಡಿವೆ, ಸದ್ಯದಲ್ಲಿಯೇ ಸುಳ್ಯದ ಚಿತ್ರಣ ಬದಲಾಗಿ ಜನರ ಆಪ್ ಪಕ್ಷವನ್ನು ಒಪ್ಪಿಕೊಳ್ಳಲಿದ್ದಾರೆ ,ಮೇ.8 ರಂದು ತಾಲೂಕಿನ ಸಂಪಾಜೆಯಿಂದ ಆರಂಭಗೊಂಡು ನಗರ ವ್ಯಾಪ್ತಿ, ಹಾಗೂ ತಾಲೂಕಿನಾದ್ಯಂತ ಚುನಾವಣಾ ಪ್ರಚಾರ ಮೆರವಣಿಗೆ ನಡೆಯಲಿದೆ ನೂರಾರು ಕಾರ್ಯಕರ್ತರು ಪಕ್ಷದ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ
June 23, 2025
11:40 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group