ಸುದ್ದಿಗಳು

ಮಾ.21 ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರ ಸಮಾವೇಶ | ವೃತ್ತಿಪರ, ಸಾಮಾಜಿಕ ಕಾರ್ಯಕರ್ತರ ಪಕ್ಷ ಸೇರ್ಪಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯನ್ನು ಮುಂದಿರಿಸಿಕೊಂಡು ಆಮ್‌ ಆದ್ಮಿ ಪಾರ್ಟಿಯು ಸುಳ್ಯದಲ್ಲಿ ಹೆಜ್ಜೆ ಇರಿಸಿದ್ದು ಇದೀಗ ಮಾ. 21 ರಂದು ಕಾರ್ಯಕರ್ತರ ಸಮಾವೇಶ ಹಾಗೂ ವೃತ್ತಿಪರ, ಸಾಮಾಜಿಕ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ದ. ಕ ಮತ್ತು ಉಡುಪಿ ಜಿಲ್ಲಾ ಎಎಪಿ ಉಸ್ತುವಾರಿ ಅಶೋಕ್ ಎಡಮಲೆ ತಿಳಿಸಿದ್ದಾರೆ.

Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು ಆಮ್ ಆದ್ಮಿ ಪಕ್ಷದ ಪಂಜಾಬ್ ಗೆಲುವನ್ನು ಆಚರಿಸಲು ಮತ್ತು ಸ್ಥಳೀಯವಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ  ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಕ್ಷದ ಕಾರ್ಯಕರ್ತರ ಸಭೆ ಮತ್ತು ಸಾರ್ವಜನಿಕ ಸಭೆ ನಡೆಯಲಿದೆ. ಇದೇ ವೇಳೆ ಪಕ್ಷ ಸೇರ್ಪಡೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು. ಮದ್ಯಾಹ್ನ 2.30 ಕ್ಕೆ ಕಾನತ್ತಿಲ ದೇವಮ್ಮ ಸಂಕೀರ್ಣ ಸಭಾಂಗಣ ದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು ಸುಳ್ಯದ ಪ್ರಸಿದ್ಧ ವೃತ್ತಿಪರರು ಮತ್ತು ಸಾಮಾಜಿಕ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಸಂಜೆ 4 ಕ್ಕೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.

ಆಪ್ ರಾಜ್ಯ ಸಂಚಾಲಕ ಹಾಗೂ ರಾಷ್ಟೀಯ ಕಾರ್ಯಕಾರಿಣಿ ಸದಸ್ಯರಾದ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಉಸ್ತುವಾರಿ ವಿಜಯ್ ಶರ್ಮ, ರಾಜ್ಯ ವಕ್ತಾರ ಜಗದೀಶ ಸದಮ್, ರಾಜ್ಯ ಸಂಘಟನಾ ಕಾರ್ಯದರ್ಶಿ ದರ್ಶನ್ ಜೈನ್, ರಾಜ್ಯ ಯುವ ಘಟಕದ ಸಂಚಾಲಕ ಮುಕುಂದ ಗೌಡ, ಬೆಂಗಳೂರು ನಗರ ಸಹ ಸಂಚಾಲಕ ಸುರೇಶ ರಾಥೋಡ್, ದ. ಕ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಅಶೋಕ್ ಎಡಮಲೆ, ದ.ಕ. ಜಿಲ್ಲಾ ಸಂಚಾಲಕ ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಂಚಾಲಕ ಸ್ಟಿಫೆನ್ ರಿಚರ್ಡ್ ಲೋಬೊ, ಮೊದಲಾದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪಕ್ಷ ಸೇರ್ಪಡೆಗೆ ಅನೇಕರು ಉತ್ಸಾಹ ತೋರಿದ್ದು ಯುವಕರೂ ಮುಂದೆ ಬಂದಿದ್ದಾರೆ. ಈಗಾಗಲೇ ಹಲವು ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಲಾಗಿದೆ. ಸಂಪಾಜೆಯಿಂದ ತೊಡಗಿ  ಕಡಬದವರೆಗೆ ಸುಳ್ಯ ವಿಧಾನಸಭಾ ಕ್ಷೇತ್ರ ವಿವಿದೆಡೆಯಿಂದ ಜನರು ಆಮ್‌ ಆದ್ಮಿಯತ್ತ ಆಸಕ್ತಿ ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿಸೇರ್ಪಡೆಯ ಬಗ್ಗೆ ಜನರಿಗೆ ತಿಳಿಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸಂಚಾಲಕ ರಶೀದ್‌, ಜೊತೆ ಕಾರ್ಯದರ್ಶಿ ದೀಕ್ಷಿತ್‌ ಉಪಸ್ಥಿತರಿದ್ದರು.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

4 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

9 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

11 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

11 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

11 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

12 hours ago