Advertisement
ಸುದ್ದಿಗಳು

ಮಾ.21 ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರ ಸಮಾವೇಶ | ವೃತ್ತಿಪರ, ಸಾಮಾಜಿಕ ಕಾರ್ಯಕರ್ತರ ಪಕ್ಷ ಸೇರ್ಪಡೆ |

Share

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯನ್ನು ಮುಂದಿರಿಸಿಕೊಂಡು ಆಮ್‌ ಆದ್ಮಿ ಪಾರ್ಟಿಯು ಸುಳ್ಯದಲ್ಲಿ ಹೆಜ್ಜೆ ಇರಿಸಿದ್ದು ಇದೀಗ ಮಾ. 21 ರಂದು ಕಾರ್ಯಕರ್ತರ ಸಮಾವೇಶ ಹಾಗೂ ವೃತ್ತಿಪರ, ಸಾಮಾಜಿಕ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ದ. ಕ ಮತ್ತು ಉಡುಪಿ ಜಿಲ್ಲಾ ಎಎಪಿ ಉಸ್ತುವಾರಿ ಅಶೋಕ್ ಎಡಮಲೆ ತಿಳಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು ಆಮ್ ಆದ್ಮಿ ಪಕ್ಷದ ಪಂಜಾಬ್ ಗೆಲುವನ್ನು ಆಚರಿಸಲು ಮತ್ತು ಸ್ಥಳೀಯವಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ  ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಕ್ಷದ ಕಾರ್ಯಕರ್ತರ ಸಭೆ ಮತ್ತು ಸಾರ್ವಜನಿಕ ಸಭೆ ನಡೆಯಲಿದೆ. ಇದೇ ವೇಳೆ ಪಕ್ಷ ಸೇರ್ಪಡೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು. ಮದ್ಯಾಹ್ನ 2.30 ಕ್ಕೆ ಕಾನತ್ತಿಲ ದೇವಮ್ಮ ಸಂಕೀರ್ಣ ಸಭಾಂಗಣ ದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು ಸುಳ್ಯದ ಪ್ರಸಿದ್ಧ ವೃತ್ತಿಪರರು ಮತ್ತು ಸಾಮಾಜಿಕ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಸಂಜೆ 4 ಕ್ಕೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.

ಆಪ್ ರಾಜ್ಯ ಸಂಚಾಲಕ ಹಾಗೂ ರಾಷ್ಟೀಯ ಕಾರ್ಯಕಾರಿಣಿ ಸದಸ್ಯರಾದ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಉಸ್ತುವಾರಿ ವಿಜಯ್ ಶರ್ಮ, ರಾಜ್ಯ ವಕ್ತಾರ ಜಗದೀಶ ಸದಮ್, ರಾಜ್ಯ ಸಂಘಟನಾ ಕಾರ್ಯದರ್ಶಿ ದರ್ಶನ್ ಜೈನ್, ರಾಜ್ಯ ಯುವ ಘಟಕದ ಸಂಚಾಲಕ ಮುಕುಂದ ಗೌಡ, ಬೆಂಗಳೂರು ನಗರ ಸಹ ಸಂಚಾಲಕ ಸುರೇಶ ರಾಥೋಡ್, ದ. ಕ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಅಶೋಕ್ ಎಡಮಲೆ, ದ.ಕ. ಜಿಲ್ಲಾ ಸಂಚಾಲಕ ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಂಚಾಲಕ ಸ್ಟಿಫೆನ್ ರಿಚರ್ಡ್ ಲೋಬೊ, ಮೊದಲಾದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪಕ್ಷ ಸೇರ್ಪಡೆಗೆ ಅನೇಕರು ಉತ್ಸಾಹ ತೋರಿದ್ದು ಯುವಕರೂ ಮುಂದೆ ಬಂದಿದ್ದಾರೆ. ಈಗಾಗಲೇ ಹಲವು ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಲಾಗಿದೆ. ಸಂಪಾಜೆಯಿಂದ ತೊಡಗಿ  ಕಡಬದವರೆಗೆ ಸುಳ್ಯ ವಿಧಾನಸಭಾ ಕ್ಷೇತ್ರ ವಿವಿದೆಡೆಯಿಂದ ಜನರು ಆಮ್‌ ಆದ್ಮಿಯತ್ತ ಆಸಕ್ತಿ ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿಸೇರ್ಪಡೆಯ ಬಗ್ಗೆ ಜನರಿಗೆ ತಿಳಿಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸಂಚಾಲಕ ರಶೀದ್‌, ಜೊತೆ ಕಾರ್ಯದರ್ಶಿ ದೀಕ್ಷಿತ್‌ ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago