Advertisement
ಸುದ್ದಿಗಳು

ಮಾ.21 ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರ ಸಮಾವೇಶ | ವೃತ್ತಿಪರ, ಸಾಮಾಜಿಕ ಕಾರ್ಯಕರ್ತರ ಪಕ್ಷ ಸೇರ್ಪಡೆ |

Share

ಸುಳ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯನ್ನು ಮುಂದಿರಿಸಿಕೊಂಡು ಆಮ್‌ ಆದ್ಮಿ ಪಾರ್ಟಿಯು ಸುಳ್ಯದಲ್ಲಿ ಹೆಜ್ಜೆ ಇರಿಸಿದ್ದು ಇದೀಗ ಮಾ. 21 ರಂದು ಕಾರ್ಯಕರ್ತರ ಸಮಾವೇಶ ಹಾಗೂ ವೃತ್ತಿಪರ, ಸಾಮಾಜಿಕ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ದ. ಕ ಮತ್ತು ಉಡುಪಿ ಜಿಲ್ಲಾ ಎಎಪಿ ಉಸ್ತುವಾರಿ ಅಶೋಕ್ ಎಡಮಲೆ ತಿಳಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು ಆಮ್ ಆದ್ಮಿ ಪಕ್ಷದ ಪಂಜಾಬ್ ಗೆಲುವನ್ನು ಆಚರಿಸಲು ಮತ್ತು ಸ್ಥಳೀಯವಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ  ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಕ್ಷದ ಕಾರ್ಯಕರ್ತರ ಸಭೆ ಮತ್ತು ಸಾರ್ವಜನಿಕ ಸಭೆ ನಡೆಯಲಿದೆ. ಇದೇ ವೇಳೆ ಪಕ್ಷ ಸೇರ್ಪಡೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು. ಮದ್ಯಾಹ್ನ 2.30 ಕ್ಕೆ ಕಾನತ್ತಿಲ ದೇವಮ್ಮ ಸಂಕೀರ್ಣ ಸಭಾಂಗಣ ದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು ಸುಳ್ಯದ ಪ್ರಸಿದ್ಧ ವೃತ್ತಿಪರರು ಮತ್ತು ಸಾಮಾಜಿಕ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಸಂಜೆ 4 ಕ್ಕೆ ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.

ಆಪ್ ರಾಜ್ಯ ಸಂಚಾಲಕ ಹಾಗೂ ರಾಷ್ಟೀಯ ಕಾರ್ಯಕಾರಿಣಿ ಸದಸ್ಯರಾದ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಉಸ್ತುವಾರಿ ವಿಜಯ್ ಶರ್ಮ, ರಾಜ್ಯ ವಕ್ತಾರ ಜಗದೀಶ ಸದಮ್, ರಾಜ್ಯ ಸಂಘಟನಾ ಕಾರ್ಯದರ್ಶಿ ದರ್ಶನ್ ಜೈನ್, ರಾಜ್ಯ ಯುವ ಘಟಕದ ಸಂಚಾಲಕ ಮುಕುಂದ ಗೌಡ, ಬೆಂಗಳೂರು ನಗರ ಸಹ ಸಂಚಾಲಕ ಸುರೇಶ ರಾಥೋಡ್, ದ. ಕ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಅಶೋಕ್ ಎಡಮಲೆ, ದ.ಕ. ಜಿಲ್ಲಾ ಸಂಚಾಲಕ ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಂಚಾಲಕ ಸ್ಟಿಫೆನ್ ರಿಚರ್ಡ್ ಲೋಬೊ, ಮೊದಲಾದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪಕ್ಷ ಸೇರ್ಪಡೆಗೆ ಅನೇಕರು ಉತ್ಸಾಹ ತೋರಿದ್ದು ಯುವಕರೂ ಮುಂದೆ ಬಂದಿದ್ದಾರೆ. ಈಗಾಗಲೇ ಹಲವು ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಲಾಗಿದೆ. ಸಂಪಾಜೆಯಿಂದ ತೊಡಗಿ  ಕಡಬದವರೆಗೆ ಸುಳ್ಯ ವಿಧಾನಸಭಾ ಕ್ಷೇತ್ರ ವಿವಿದೆಡೆಯಿಂದ ಜನರು ಆಮ್‌ ಆದ್ಮಿಯತ್ತ ಆಸಕ್ತಿ ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿಸೇರ್ಪಡೆಯ ಬಗ್ಗೆ ಜನರಿಗೆ ತಿಳಿಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸಂಚಾಲಕ ರಶೀದ್‌, ಜೊತೆ ಕಾರ್ಯದರ್ಶಿ ದೀಕ್ಷಿತ್‌ ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

9 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

2 days ago