ರೈತ ಹೋರಾಟದ ಭಾರತ ಬಂದ್ ಗೆ ಉಡುಪಿ ಹಾಗೂ ದ ಕ ಜಿಲ್ಲೆ ಸಂಪೂರ್ಣವಾಗಿ ಆಮ್ ಆದ್ಮಿ ಪಾರ್ಟಿ ಉಡುಪಿ ಜಿಲ್ಲೆ ಬೆಂಬಲಿಸಲಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಭಾನುವಾರ ಉಡುಪಿ ಆಮ್ ಆದ್ಮಿ ಪಾರ್ಟಿ ಸಭೆ ನಡೆಯಿತು. ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಮಂಡಳಿ ಸದಸ್ಯರು ಹಾಗೂ ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ವೀಕ್ಷಕರಾದ ಅಶೋಕ ಎಡಮಲೆ ಸಮ್ಮುಖದಲ್ಲಿ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ನಡೆದು, ಪಕ್ಷದ ಚಟುವಟಿಕೆಗಳು ಹಾಗೂ ಸಂಘಟನೆ ಬೆಳವಣಿಗೆ ಬಗ್ಗೆ ಚರ್ಚಿಸಿ ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆಯ ಆಕಾಂಕ್ಷಿಗಳನ್ನು ಗುರುತಿಸುವುದು, ಕಾಪು ವಿಧಾನಸಭಾ ಕ್ಷೇತ್ರದ ಎಎಪಿ ಪಕ್ಷದ ಸಭೆಯನ್ನು ಮುಂದಿನ ಅಕ್ಟೋಬರ್ 10 ರಂದು ನಡೆಸುವುದು ಮತ್ತು ಹೆಬ್ರಿ ಅಟೋ ಸ್ಟ್ಯಾಂಡ್ ಸಮಸ್ಯೆ ಬಗ್ಗೆ ಎಎಪಿ ನಿಯೋಗ ತೆರಳಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮೂಲಕ ಪರಿಹಾರಕ್ಕೆ ಆಗ್ರಹ ಮಾಡಲು ನಿರ್ಣಯಿಸಿತು.
ಇದೇ ವೇಳೆ ರೈತ ಹೋರಾಟದ ಭಾರತ ಬಂದ್ ಗೆ ಉಡುಪಿ ಹಾಗೂ ದ ಕ ಜಿಲ್ಲೆ ಸಂಪೂರ್ಣವಾಗಿ ಆಮ್ ಆದ್ಮಿ ಪಾರ್ಟಿ ಉಡುಪಿ ಜಿಲ್ಲೆ ಬೆಂಬಲಿಸಲಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಮಂಡಳಿ ಸದಸ್ಯ ಅಶೋಕ್ ಎಡಮಲೆ ತಿಳಿಸಿದರು.
ಸಭೆಯಲ್ಲಿ ಪಕ್ಷದ ಮುಖಂಡರಾದ ಸುರೇಶ್ ಭಂಡಾರಿ, ಸ್ಟೀಫನ್ ರಿಚರ್ಡ್, ರಮೇಶ್ ಕೋಟ್ಯಾನ್, ವಿಜಯಾನಂದ್ ಪಂಗಳ, ಹರೀಶ್ ಟಿ ಸುವರ್ಣ, ಮೋಹನ್ ಸಾಲೆಕರ್, ಹಿಲ್ಡಾ ಡಿಸೋಜ, ಮಂಜುನಾಥ್ ಭಟ್, ಒಲಿವರ್ ಡಿಸೋಜ, ಆಕರ್ಷ್, ಸವಿತ ಹಾಗೂ ಆಶ್ಲಿ ಕೊರೆನೆಲಿಯೋ ಭಾಗವಹಿಸಿದ್ದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…