ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ

September 29, 2024
10:21 PM

ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 1 ಮತ್ತು 2 ರಂದು ಎರಡು ದಿನಗಳ ಕಾಲ ದಾವಣಗೆರೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ತೋಟಗಾರಿಕಾ ವಿಜ್ಞಾನಿ ಡಾ.ದೇವರಾಜ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ಸಸ್ಯ ಸಂತೆ, ವಸ್ತು ಪ್ರದರ್ಶನ ಮತ್ತು ಸಾವಯದ ಪರಿಕರಗಳ” ಮಾರಾಟ ಮೇಳದಲ್ಲಿ ಉತ್ತಮ ಗುಣಮಟ್ಟದ 50 ಕ್ಕೂ ಹೆಚ್ಚು ಹಣ್ಣಿನ ಗಿಡಗಳ ಮಾರಾಟ, ದೇಸಿ ಬೀಜಗಳ ಪ್ರದರ್ಶನ ಮತ್ತು ಮಾರಾಟ, ಕೈತೋಟ ಮತ್ತು ತಾರಸಿ ತೋಟಗಳಿಗೆ ಬೇಕಾಗುವ ಸಲಕರಣೆಗಳು, ಸಾವಯವ ಪರಿಕರ ಗೊಬ್ಬರಗಳ ಮಾರಾಟ, ಸಿರಿಧಾನ್ಯಗಳ ಉಪ ಉತ್ಪನ್ನಗಳು, ಸಾವಯವ ಆಹಾರ ಪದಾರ್ಥಗಳ ಮಾರಾಟ ನಡೆಯಲಿದೆ ಎಂದರು.

ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ವತಿಯಿಂದ ಬೆಂಗಳೂರಿನ ಐಸಿಎಂಆರ್-ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ವಿ. ವೆಂಕಟಸುಬ್ರಮಣ್ಯ ಸಾವಯವ ಪರಿಕರಗಳ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror