ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 1 ಮತ್ತು 2 ರಂದು ಎರಡು ದಿನಗಳ ಕಾಲ ದಾವಣಗೆರೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ತೋಟಗಾರಿಕಾ ವಿಜ್ಞಾನಿ ಡಾ.ದೇವರಾಜ್ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ಸಸ್ಯ ಸಂತೆ, ವಸ್ತು ಪ್ರದರ್ಶನ ಮತ್ತು ಸಾವಯದ ಪರಿಕರಗಳ” ಮಾರಾಟ ಮೇಳದಲ್ಲಿ ಉತ್ತಮ ಗುಣಮಟ್ಟದ 50 ಕ್ಕೂ ಹೆಚ್ಚು ಹಣ್ಣಿನ ಗಿಡಗಳ ಮಾರಾಟ, ದೇಸಿ ಬೀಜಗಳ ಪ್ರದರ್ಶನ ಮತ್ತು ಮಾರಾಟ, ಕೈತೋಟ ಮತ್ತು ತಾರಸಿ ತೋಟಗಳಿಗೆ ಬೇಕಾಗುವ ಸಲಕರಣೆಗಳು, ಸಾವಯವ ಪರಿಕರ ಗೊಬ್ಬರಗಳ ಮಾರಾಟ, ಸಿರಿಧಾನ್ಯಗಳ ಉಪ ಉತ್ಪನ್ನಗಳು, ಸಾವಯವ ಆಹಾರ ಪದಾರ್ಥಗಳ ಮಾರಾಟ ನಡೆಯಲಿದೆ ಎಂದರು.
ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ವತಿಯಿಂದ ಬೆಂಗಳೂರಿನ ಐಸಿಎಂಆರ್-ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ವಿ. ವೆಂಕಟಸುಬ್ರಮಣ್ಯ ಸಾವಯವ ಪರಿಕರಗಳ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ ಎಂದರು.
30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಕೃಷಿ ಭವಿಷ್ಯವನ್ನು ಇನ್ನಷ್ಟು ಸುಧಾರಿಸುವ ನಿರೀಕ್ಷೆ ಇದೆ.
ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ…
ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.
ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…
ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ.…