Advertisement
ವಿಶೇಷ ವರದಿಗಳು

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ

Share

ತುಳು ನಾಡಿನ ಬಹುತೇಕ ಆಚರಣೆಗಳು ಪ್ರಕೃತಿ, ಪರಿಸರಕ್ಕೆ ಹೊಂದಿಕೊಂಡಿರುವ ಆಚರಣೆಗಳು. ಅಂತಹದೊಂದು ಆಚರಣೆಯಲ್ಲಿ ಆಟಿ ತಿಂಗಳು ಕೂಡಾ ಒಂದು. ಈ ಒಂದು ತಿಂಗಳು ಪ್ರಕೃತಿಗೆ ಪೂರಕವಾದ ಆಚರಣೆಗಳು, ಆಹಾರಗಳು, ಪದ್ಧತಿಗಳು, ಸಂಪ್ರದಾಯಗಳು ಇರುತ್ತವೆ. ಇಂದು ಆಟಿಯಲ್ಲಿ ಬರುವ ಅಮವಾಸ್ಯೆ. ಅದು ಕೂಡಾ ವಿಶೇಷವೇ ಆಗಿದೆ.

Advertisement

ಸಾಮಾನ್ಯವಾಗಿ ನಾವು , ದಕ್ಷಿಣ ಕನ್ನಡದವರು ಹಬ್ಬಗಳನ್ನು ಆಚರಿಸುವುದು ಕಡಿಮೆ. ಚೌತಿ, ದೀಪಾವಳಿ, ಆಯುಧಪೂಜೆಗಳ ಆಚರಣೆ ಹೆಚ್ಚಿನ ಮನೆಗಳಲ್ಲಿ ಆಚರಿಸುತ್ತೇವೆ. ಉಳಿದಂತೆ ಪತ್ತನಾಜೆ, ಕೆಡ್ಡಸ, ನವರಾತ್ರಿ, ಅಷ್ಟಮಿ ಮೊದಲಾದವುಗಳು ತರವಾಡು ಮನೆಗಳಲ್ಲಿ ಮಾತ್ರ ಆಚರಿಸುವುದು ಕಂಡು ಬರುತ್ತದೆ . ನನಗೆ ಹೆಮ್ಮೆಯೆನಿಸುತ್ತದೆ. ನಮ್ಮ ಆಚರಣೆಗಳಲ್ಲಿ ಗೌಜಿ ಗದ್ಧಲಗಳಿಲ್ಲ, ತೋರಿಕೆಯ ಕ್ರಮಗಳಿಲ್ಲ. ಅರ್ಥವಿಲ್ಲದ ಆಚರಣೆಗಳಿಲ್ಲ. ನೇರಾ ನೇರಾ ಪ್ರಕೃತಿಯಲ್ಲಿ  ಮಿಳಿತವಾದುದು. ಪ್ರತಿಯೊಂದು ನಮ್ಮ ಆಚರಣೆಗಳಿಗೂ , ಪ್ರಕೃತಿಯ ಬದಲಾವಣೆಗೂ ಹತ್ತಿರದ ಸಂಬಂಧವಿದೆ. ಮಳೆ , ಬಿಸಿಲು, ಚಳಿಯ ನೇರ ಪ್ರಭಾವ ನಮ್ಮ ಆಚರಣೆಗಳಲ್ಲಿವೆ. ನಮ್ಮ ಹಿರಿಯರು ವ್ಯವಸ್ಥಿತವಾಗಿ ನಮ್ಮ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಬಂದಿದ್ದಾರೆ. ಆಯಾ ತಿಂಗಳಿಗನುಗುಣವಾಗಿ ನಮ್ಮ ಹಬ್ಬಗಳಿವೆ . ಆಹಾರ ಪದ್ಧತಿಯೂ ಹಾಗೆಯೇ. ಈಗ ಆಟಿ ತಿಂಗಳು.

ಆಟಿ ತಿಂಗಳು ಎಂದರೆ ಕಾರ್ಕಟಕ ಮಾಸ ಅಥವಾ ಶೂನ್ಯ ಮಾಸ. ಜುಲೈ ತಿಂಗಳಲ್ಲಿ ಬರುವ ಕರ್ಕಾಟಕ ಸಂಕ್ರಮಣದ ಮರುದಿನದಿಂದ ಆಟಿ ಆರಂಭವಾಗಿ ಮುಂದಿನ ಸಂಕ್ರಮಣದವರೆಗೆ ಇರುತ್ತದೆ. ತುಳು ಸಂಪ್ರದಾಯದ ನಾಲ್ಕನೇ ತಿಂಗಳೇ ಆಟಿ…… ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಗೃಹ್ರವೇಶ, ಮದುವೆ, ನಾಮಕರಣ ಮೊದಲಾದವುಗಳಿಗೆ ಈ ತಿಂಗಳಲ್ಲಿ ಆದ್ಯತೆ ಇಲ್ಲ. ಅದಕ್ಕಾಗಿ ಧಾರ್ಮಿಕರು ಈ ತಿಂಗಳನ್ನು ಬಿಟ್ಟು ಎಲ್ಲಾ ಶುಭಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಾರೆ. ಅಂದರೆ ಈ ತಿಂಗಳು ಅನಿಷ್ಟ ಅಂತಲ್ಲ, ಮಳೆಯ ಜೋರಾದ ರುದ್ರನರ್ತನ, ಒಮ್ಮೊಮ್ಮೆ ಬಿಸಿಲು ಇರುವುದರಿಂದ ಆರೋಗ್ಯ, ಪರಿಸರ ಎರಡೂ ಸಂಕಷ್ಟವಾಗಿರುತ್ತದೆ. ಹೀಗಾಗಿ ಆಟಿ ಎನ್ನುವುದೇ ತುಳುನಾಡಿನಲ್ಲಿ ಬಹಳ ಅರ್ಥವತ್ತಾಗಿರುತ್ತದೆ.

ಇದು ಹಳ್ಳಿಯ ಜನಜೀವನಕ್ಕೆ ಕಷ್ಟದ ತಿಂಗಳು. ” ಆಟಿ ಎಂದರೆ ಆಪತ್ತು, ಆಷಾಡ‍ ಅಂದರೆ ಅಮವಾಸ್ಯೆ” ವರುಷವಿಡೀ ಕಷ್ಟ ಪಟ್ಟ ಕೃಷಿಕನ ಉಳಿವು ಅಳಿವು ಈ ತಿಂಗಳಿನ ಮಳೆಯ ಮೇಲೆ ಅವಲಂಬಿತವಾಗಿದೆ. ಅದಕ್ಕಾಗಿಯೇ ಈ ಗಾದೆ ಹುಟ್ಟಿ ಕೊಂಡಿರ ಬೇಕು . “ಆಟಿ ತಿಂಗಳ ಮಳೆ ಅಮೃತಕ್ಕೆ ಸಮ ” ಸಿಕ್ಕಾಪಟ್ಟೆ ಮಳೆ ಸುರಿಯುವುದರಿಂದ. ಈ ಸಮಯದಲ್ಲಿ ರೋಗ ರುಜಿನಗಳು ಹರಡುವ ಭಯ ಕಾಡುವುದರಿಂದ ನಿರೋಧ ಶಕ್ತಿ ಹೆಚ್ಚಿಸುವ ಆಹಾರ ವಸ್ತುಗಳನ್ನು ಸೇವಿಸುವುದು ಇಲ್ಲಿನ ಪದ್ಧತಿ.

ವಿಪರೀತ ಮಳೆ ಸುರಿಯುವುದರಿಂದ ಕೃಷಿ ಕಾರ್ಯಗಳು ಕುಂಟುತ್ತಾ ಸಾಗುತ್ತದೆ. ಆಟಿ ತಿಂಗಳು ಕಷ್ಟದ ತಿಂಗಳು ಆದರೂ ಮೆಚ್ಚಿನ ತಿಂಗಳು!

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

14 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

14 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

14 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

14 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

14 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

14 hours ago