Advertisement
ವಿಶೇಷ ವರದಿಗಳು

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ

Share

ತುಳು ನಾಡಿನ ಬಹುತೇಕ ಆಚರಣೆಗಳು ಪ್ರಕೃತಿ, ಪರಿಸರಕ್ಕೆ ಹೊಂದಿಕೊಂಡಿರುವ ಆಚರಣೆಗಳು. ಅಂತಹದೊಂದು ಆಚರಣೆಯಲ್ಲಿ ಆಟಿ ತಿಂಗಳು ಕೂಡಾ ಒಂದು. ಈ ಒಂದು ತಿಂಗಳು ಪ್ರಕೃತಿಗೆ ಪೂರಕವಾದ ಆಚರಣೆಗಳು, ಆಹಾರಗಳು, ಪದ್ಧತಿಗಳು, ಸಂಪ್ರದಾಯಗಳು ಇರುತ್ತವೆ. ಇಂದು ಆಟಿಯಲ್ಲಿ ಬರುವ ಅಮವಾಸ್ಯೆ. ಅದು ಕೂಡಾ ವಿಶೇಷವೇ ಆಗಿದೆ.

Advertisement
Advertisement

ಸಾಮಾನ್ಯವಾಗಿ ನಾವು , ದಕ್ಷಿಣ ಕನ್ನಡದವರು ಹಬ್ಬಗಳನ್ನು ಆಚರಿಸುವುದು ಕಡಿಮೆ. ಚೌತಿ, ದೀಪಾವಳಿ, ಆಯುಧಪೂಜೆಗಳ ಆಚರಣೆ ಹೆಚ್ಚಿನ ಮನೆಗಳಲ್ಲಿ ಆಚರಿಸುತ್ತೇವೆ. ಉಳಿದಂತೆ ಪತ್ತನಾಜೆ, ಕೆಡ್ಡಸ, ನವರಾತ್ರಿ, ಅಷ್ಟಮಿ ಮೊದಲಾದವುಗಳು ತರವಾಡು ಮನೆಗಳಲ್ಲಿ ಮಾತ್ರ ಆಚರಿಸುವುದು ಕಂಡು ಬರುತ್ತದೆ . ನನಗೆ ಹೆಮ್ಮೆಯೆನಿಸುತ್ತದೆ. ನಮ್ಮ ಆಚರಣೆಗಳಲ್ಲಿ ಗೌಜಿ ಗದ್ಧಲಗಳಿಲ್ಲ, ತೋರಿಕೆಯ ಕ್ರಮಗಳಿಲ್ಲ. ಅರ್ಥವಿಲ್ಲದ ಆಚರಣೆಗಳಿಲ್ಲ. ನೇರಾ ನೇರಾ ಪ್ರಕೃತಿಯಲ್ಲಿ  ಮಿಳಿತವಾದುದು. ಪ್ರತಿಯೊಂದು ನಮ್ಮ ಆಚರಣೆಗಳಿಗೂ , ಪ್ರಕೃತಿಯ ಬದಲಾವಣೆಗೂ ಹತ್ತಿರದ ಸಂಬಂಧವಿದೆ. ಮಳೆ , ಬಿಸಿಲು, ಚಳಿಯ ನೇರ ಪ್ರಭಾವ ನಮ್ಮ ಆಚರಣೆಗಳಲ್ಲಿವೆ. ನಮ್ಮ ಹಿರಿಯರು ವ್ಯವಸ್ಥಿತವಾಗಿ ನಮ್ಮ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಬಂದಿದ್ದಾರೆ. ಆಯಾ ತಿಂಗಳಿಗನುಗುಣವಾಗಿ ನಮ್ಮ ಹಬ್ಬಗಳಿವೆ . ಆಹಾರ ಪದ್ಧತಿಯೂ ಹಾಗೆಯೇ. ಈಗ ಆಟಿ ತಿಂಗಳು.

ಆಟಿ ತಿಂಗಳು ಎಂದರೆ ಕಾರ್ಕಟಕ ಮಾಸ ಅಥವಾ ಶೂನ್ಯ ಮಾಸ. ಜುಲೈ ತಿಂಗಳಲ್ಲಿ ಬರುವ ಕರ್ಕಾಟಕ ಸಂಕ್ರಮಣದ ಮರುದಿನದಿಂದ ಆಟಿ ಆರಂಭವಾಗಿ ಮುಂದಿನ ಸಂಕ್ರಮಣದವರೆಗೆ ಇರುತ್ತದೆ. ತುಳು ಸಂಪ್ರದಾಯದ ನಾಲ್ಕನೇ ತಿಂಗಳೇ ಆಟಿ…… ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಗೃಹ್ರವೇಶ, ಮದುವೆ, ನಾಮಕರಣ ಮೊದಲಾದವುಗಳಿಗೆ ಈ ತಿಂಗಳಲ್ಲಿ ಆದ್ಯತೆ ಇಲ್ಲ. ಅದಕ್ಕಾಗಿ ಧಾರ್ಮಿಕರು ಈ ತಿಂಗಳನ್ನು ಬಿಟ್ಟು ಎಲ್ಲಾ ಶುಭಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಾರೆ. ಅಂದರೆ ಈ ತಿಂಗಳು ಅನಿಷ್ಟ ಅಂತಲ್ಲ, ಮಳೆಯ ಜೋರಾದ ರುದ್ರನರ್ತನ, ಒಮ್ಮೊಮ್ಮೆ ಬಿಸಿಲು ಇರುವುದರಿಂದ ಆರೋಗ್ಯ, ಪರಿಸರ ಎರಡೂ ಸಂಕಷ್ಟವಾಗಿರುತ್ತದೆ. ಹೀಗಾಗಿ ಆಟಿ ಎನ್ನುವುದೇ ತುಳುನಾಡಿನಲ್ಲಿ ಬಹಳ ಅರ್ಥವತ್ತಾಗಿರುತ್ತದೆ.

ಇದು ಹಳ್ಳಿಯ ಜನಜೀವನಕ್ಕೆ ಕಷ್ಟದ ತಿಂಗಳು. ” ಆಟಿ ಎಂದರೆ ಆಪತ್ತು, ಆಷಾಡ‍ ಅಂದರೆ ಅಮವಾಸ್ಯೆ” ವರುಷವಿಡೀ ಕಷ್ಟ ಪಟ್ಟ ಕೃಷಿಕನ ಉಳಿವು ಅಳಿವು ಈ ತಿಂಗಳಿನ ಮಳೆಯ ಮೇಲೆ ಅವಲಂಬಿತವಾಗಿದೆ. ಅದಕ್ಕಾಗಿಯೇ ಈ ಗಾದೆ ಹುಟ್ಟಿ ಕೊಂಡಿರ ಬೇಕು . “ಆಟಿ ತಿಂಗಳ ಮಳೆ ಅಮೃತಕ್ಕೆ ಸಮ ” ಸಿಕ್ಕಾಪಟ್ಟೆ ಮಳೆ ಸುರಿಯುವುದರಿಂದ. ಈ ಸಮಯದಲ್ಲಿ ರೋಗ ರುಜಿನಗಳು ಹರಡುವ ಭಯ ಕಾಡುವುದರಿಂದ ನಿರೋಧ ಶಕ್ತಿ ಹೆಚ್ಚಿಸುವ ಆಹಾರ ವಸ್ತುಗಳನ್ನು ಸೇವಿಸುವುದು ಇಲ್ಲಿನ ಪದ್ಧತಿ.

ವಿಪರೀತ ಮಳೆ ಸುರಿಯುವುದರಿಂದ ಕೃಷಿ ಕಾರ್ಯಗಳು ಕುಂಟುತ್ತಾ ಸಾಗುತ್ತದೆ. ಆಟಿ ತಿಂಗಳು ಕಷ್ಟದ ತಿಂಗಳು ಆದರೂ ಮೆಚ್ಚಿನ ತಿಂಗಳು!

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

3 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

8 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

8 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

18 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

18 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

18 hours ago