Advertisement
ವಿಶೇಷ ವರದಿಗಳು

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ

Share

ತುಳು ನಾಡಿನ ಬಹುತೇಕ ಆಚರಣೆಗಳು ಪ್ರಕೃತಿ, ಪರಿಸರಕ್ಕೆ ಹೊಂದಿಕೊಂಡಿರುವ ಆಚರಣೆಗಳು. ಅಂತಹದೊಂದು ಆಚರಣೆಯಲ್ಲಿ ಆಟಿ ತಿಂಗಳು ಕೂಡಾ ಒಂದು. ಈ ಒಂದು ತಿಂಗಳು ಪ್ರಕೃತಿಗೆ ಪೂರಕವಾದ ಆಚರಣೆಗಳು, ಆಹಾರಗಳು, ಪದ್ಧತಿಗಳು, ಸಂಪ್ರದಾಯಗಳು ಇರುತ್ತವೆ. ಇಂದು ಆಟಿಯಲ್ಲಿ ಬರುವ ಅಮವಾಸ್ಯೆ. ಅದು ಕೂಡಾ ವಿಶೇಷವೇ ಆಗಿದೆ.

ಸಾಮಾನ್ಯವಾಗಿ ನಾವು , ದಕ್ಷಿಣ ಕನ್ನಡದವರು ಹಬ್ಬಗಳನ್ನು ಆಚರಿಸುವುದು ಕಡಿಮೆ. ಚೌತಿ, ದೀಪಾವಳಿ, ಆಯುಧಪೂಜೆಗಳ ಆಚರಣೆ ಹೆಚ್ಚಿನ ಮನೆಗಳಲ್ಲಿ ಆಚರಿಸುತ್ತೇವೆ. ಉಳಿದಂತೆ ಪತ್ತನಾಜೆ, ಕೆಡ್ಡಸ, ನವರಾತ್ರಿ, ಅಷ್ಟಮಿ ಮೊದಲಾದವುಗಳು ತರವಾಡು ಮನೆಗಳಲ್ಲಿ ಮಾತ್ರ ಆಚರಿಸುವುದು ಕಂಡು ಬರುತ್ತದೆ . ನನಗೆ ಹೆಮ್ಮೆಯೆನಿಸುತ್ತದೆ. ನಮ್ಮ ಆಚರಣೆಗಳಲ್ಲಿ ಗೌಜಿ ಗದ್ಧಲಗಳಿಲ್ಲ, ತೋರಿಕೆಯ ಕ್ರಮಗಳಿಲ್ಲ. ಅರ್ಥವಿಲ್ಲದ ಆಚರಣೆಗಳಿಲ್ಲ. ನೇರಾ ನೇರಾ ಪ್ರಕೃತಿಯಲ್ಲಿ  ಮಿಳಿತವಾದುದು. ಪ್ರತಿಯೊಂದು ನಮ್ಮ ಆಚರಣೆಗಳಿಗೂ , ಪ್ರಕೃತಿಯ ಬದಲಾವಣೆಗೂ ಹತ್ತಿರದ ಸಂಬಂಧವಿದೆ. ಮಳೆ , ಬಿಸಿಲು, ಚಳಿಯ ನೇರ ಪ್ರಭಾವ ನಮ್ಮ ಆಚರಣೆಗಳಲ್ಲಿವೆ. ನಮ್ಮ ಹಿರಿಯರು ವ್ಯವಸ್ಥಿತವಾಗಿ ನಮ್ಮ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಬಂದಿದ್ದಾರೆ. ಆಯಾ ತಿಂಗಳಿಗನುಗುಣವಾಗಿ ನಮ್ಮ ಹಬ್ಬಗಳಿವೆ . ಆಹಾರ ಪದ್ಧತಿಯೂ ಹಾಗೆಯೇ. ಈಗ ಆಟಿ ತಿಂಗಳು.

ಆಟಿ ತಿಂಗಳು ಎಂದರೆ ಕಾರ್ಕಟಕ ಮಾಸ ಅಥವಾ ಶೂನ್ಯ ಮಾಸ. ಜುಲೈ ತಿಂಗಳಲ್ಲಿ ಬರುವ ಕರ್ಕಾಟಕ ಸಂಕ್ರಮಣದ ಮರುದಿನದಿಂದ ಆಟಿ ಆರಂಭವಾಗಿ ಮುಂದಿನ ಸಂಕ್ರಮಣದವರೆಗೆ ಇರುತ್ತದೆ. ತುಳು ಸಂಪ್ರದಾಯದ ನಾಲ್ಕನೇ ತಿಂಗಳೇ ಆಟಿ…… ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಗೃಹ್ರವೇಶ, ಮದುವೆ, ನಾಮಕರಣ ಮೊದಲಾದವುಗಳಿಗೆ ಈ ತಿಂಗಳಲ್ಲಿ ಆದ್ಯತೆ ಇಲ್ಲ. ಅದಕ್ಕಾಗಿ ಧಾರ್ಮಿಕರು ಈ ತಿಂಗಳನ್ನು ಬಿಟ್ಟು ಎಲ್ಲಾ ಶುಭಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಾರೆ. ಅಂದರೆ ಈ ತಿಂಗಳು ಅನಿಷ್ಟ ಅಂತಲ್ಲ, ಮಳೆಯ ಜೋರಾದ ರುದ್ರನರ್ತನ, ಒಮ್ಮೊಮ್ಮೆ ಬಿಸಿಲು ಇರುವುದರಿಂದ ಆರೋಗ್ಯ, ಪರಿಸರ ಎರಡೂ ಸಂಕಷ್ಟವಾಗಿರುತ್ತದೆ. ಹೀಗಾಗಿ ಆಟಿ ಎನ್ನುವುದೇ ತುಳುನಾಡಿನಲ್ಲಿ ಬಹಳ ಅರ್ಥವತ್ತಾಗಿರುತ್ತದೆ.

ಇದು ಹಳ್ಳಿಯ ಜನಜೀವನಕ್ಕೆ ಕಷ್ಟದ ತಿಂಗಳು. ” ಆಟಿ ಎಂದರೆ ಆಪತ್ತು, ಆಷಾಡ‍ ಅಂದರೆ ಅಮವಾಸ್ಯೆ” ವರುಷವಿಡೀ ಕಷ್ಟ ಪಟ್ಟ ಕೃಷಿಕನ ಉಳಿವು ಅಳಿವು ಈ ತಿಂಗಳಿನ ಮಳೆಯ ಮೇಲೆ ಅವಲಂಬಿತವಾಗಿದೆ. ಅದಕ್ಕಾಗಿಯೇ ಈ ಗಾದೆ ಹುಟ್ಟಿ ಕೊಂಡಿರ ಬೇಕು . “ಆಟಿ ತಿಂಗಳ ಮಳೆ ಅಮೃತಕ್ಕೆ ಸಮ ” ಸಿಕ್ಕಾಪಟ್ಟೆ ಮಳೆ ಸುರಿಯುವುದರಿಂದ. ಈ ಸಮಯದಲ್ಲಿ ರೋಗ ರುಜಿನಗಳು ಹರಡುವ ಭಯ ಕಾಡುವುದರಿಂದ ನಿರೋಧ ಶಕ್ತಿ ಹೆಚ್ಚಿಸುವ ಆಹಾರ ವಸ್ತುಗಳನ್ನು ಸೇವಿಸುವುದು ಇಲ್ಲಿನ ಪದ್ಧತಿ.

ವಿಪರೀತ ಮಳೆ ಸುರಿಯುವುದರಿಂದ ಕೃಷಿ ಕಾರ್ಯಗಳು ಕುಂಟುತ್ತಾ ಸಾಗುತ್ತದೆ. ಆಟಿ ತಿಂಗಳು ಕಷ್ಟದ ತಿಂಗಳು ಆದರೂ ಮೆಚ್ಚಿನ ತಿಂಗಳು!

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

6 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

7 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

22 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

23 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago