Advertisement
ವಿಶೇಷ ವರದಿಗಳು

ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ

Share

ತುಳು ನಾಡಿನ ಬಹುತೇಕ ಆಚರಣೆಗಳು ಪ್ರಕೃತಿ, ಪರಿಸರಕ್ಕೆ ಹೊಂದಿಕೊಂಡಿರುವ ಆಚರಣೆಗಳು. ಅಂತಹದೊಂದು ಆಚರಣೆಯಲ್ಲಿ ಆಟಿ ತಿಂಗಳು ಕೂಡಾ ಒಂದು. ಈ ಒಂದು ತಿಂಗಳು ಪ್ರಕೃತಿಗೆ ಪೂರಕವಾದ ಆಚರಣೆಗಳು, ಆಹಾರಗಳು, ಪದ್ಧತಿಗಳು, ಸಂಪ್ರದಾಯಗಳು ಇರುತ್ತವೆ. ಇಂದು ಆಟಿಯಲ್ಲಿ ಬರುವ ಅಮವಾಸ್ಯೆ. ಅದು ಕೂಡಾ ವಿಶೇಷವೇ ಆಗಿದೆ.

ಸಾಮಾನ್ಯವಾಗಿ ನಾವು , ದಕ್ಷಿಣ ಕನ್ನಡದವರು ಹಬ್ಬಗಳನ್ನು ಆಚರಿಸುವುದು ಕಡಿಮೆ. ಚೌತಿ, ದೀಪಾವಳಿ, ಆಯುಧಪೂಜೆಗಳ ಆಚರಣೆ ಹೆಚ್ಚಿನ ಮನೆಗಳಲ್ಲಿ ಆಚರಿಸುತ್ತೇವೆ. ಉಳಿದಂತೆ ಪತ್ತನಾಜೆ, ಕೆಡ್ಡಸ, ನವರಾತ್ರಿ, ಅಷ್ಟಮಿ ಮೊದಲಾದವುಗಳು ತರವಾಡು ಮನೆಗಳಲ್ಲಿ ಮಾತ್ರ ಆಚರಿಸುವುದು ಕಂಡು ಬರುತ್ತದೆ . ನನಗೆ ಹೆಮ್ಮೆಯೆನಿಸುತ್ತದೆ. ನಮ್ಮ ಆಚರಣೆಗಳಲ್ಲಿ ಗೌಜಿ ಗದ್ಧಲಗಳಿಲ್ಲ, ತೋರಿಕೆಯ ಕ್ರಮಗಳಿಲ್ಲ. ಅರ್ಥವಿಲ್ಲದ ಆಚರಣೆಗಳಿಲ್ಲ. ನೇರಾ ನೇರಾ ಪ್ರಕೃತಿಯಲ್ಲಿ  ಮಿಳಿತವಾದುದು. ಪ್ರತಿಯೊಂದು ನಮ್ಮ ಆಚರಣೆಗಳಿಗೂ , ಪ್ರಕೃತಿಯ ಬದಲಾವಣೆಗೂ ಹತ್ತಿರದ ಸಂಬಂಧವಿದೆ. ಮಳೆ , ಬಿಸಿಲು, ಚಳಿಯ ನೇರ ಪ್ರಭಾವ ನಮ್ಮ ಆಚರಣೆಗಳಲ್ಲಿವೆ. ನಮ್ಮ ಹಿರಿಯರು ವ್ಯವಸ್ಥಿತವಾಗಿ ನಮ್ಮ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ಬಂದಿದ್ದಾರೆ. ಆಯಾ ತಿಂಗಳಿಗನುಗುಣವಾಗಿ ನಮ್ಮ ಹಬ್ಬಗಳಿವೆ . ಆಹಾರ ಪದ್ಧತಿಯೂ ಹಾಗೆಯೇ. ಈಗ ಆಟಿ ತಿಂಗಳು.

ಆಟಿ ತಿಂಗಳು ಎಂದರೆ ಕಾರ್ಕಟಕ ಮಾಸ ಅಥವಾ ಶೂನ್ಯ ಮಾಸ. ಜುಲೈ ತಿಂಗಳಲ್ಲಿ ಬರುವ ಕರ್ಕಾಟಕ ಸಂಕ್ರಮಣದ ಮರುದಿನದಿಂದ ಆಟಿ ಆರಂಭವಾಗಿ ಮುಂದಿನ ಸಂಕ್ರಮಣದವರೆಗೆ ಇರುತ್ತದೆ. ತುಳು ಸಂಪ್ರದಾಯದ ನಾಲ್ಕನೇ ತಿಂಗಳೇ ಆಟಿ…… ಈ ತಿಂಗಳಿನಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಗೃಹ್ರವೇಶ, ಮದುವೆ, ನಾಮಕರಣ ಮೊದಲಾದವುಗಳಿಗೆ ಈ ತಿಂಗಳಲ್ಲಿ ಆದ್ಯತೆ ಇಲ್ಲ. ಅದಕ್ಕಾಗಿ ಧಾರ್ಮಿಕರು ಈ ತಿಂಗಳನ್ನು ಬಿಟ್ಟು ಎಲ್ಲಾ ಶುಭಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಾರೆ. ಅಂದರೆ ಈ ತಿಂಗಳು ಅನಿಷ್ಟ ಅಂತಲ್ಲ, ಮಳೆಯ ಜೋರಾದ ರುದ್ರನರ್ತನ, ಒಮ್ಮೊಮ್ಮೆ ಬಿಸಿಲು ಇರುವುದರಿಂದ ಆರೋಗ್ಯ, ಪರಿಸರ ಎರಡೂ ಸಂಕಷ್ಟವಾಗಿರುತ್ತದೆ. ಹೀಗಾಗಿ ಆಟಿ ಎನ್ನುವುದೇ ತುಳುನಾಡಿನಲ್ಲಿ ಬಹಳ ಅರ್ಥವತ್ತಾಗಿರುತ್ತದೆ.

ಇದು ಹಳ್ಳಿಯ ಜನಜೀವನಕ್ಕೆ ಕಷ್ಟದ ತಿಂಗಳು. ” ಆಟಿ ಎಂದರೆ ಆಪತ್ತು, ಆಷಾಡ‍ ಅಂದರೆ ಅಮವಾಸ್ಯೆ” ವರುಷವಿಡೀ ಕಷ್ಟ ಪಟ್ಟ ಕೃಷಿಕನ ಉಳಿವು ಅಳಿವು ಈ ತಿಂಗಳಿನ ಮಳೆಯ ಮೇಲೆ ಅವಲಂಬಿತವಾಗಿದೆ. ಅದಕ್ಕಾಗಿಯೇ ಈ ಗಾದೆ ಹುಟ್ಟಿ ಕೊಂಡಿರ ಬೇಕು . “ಆಟಿ ತಿಂಗಳ ಮಳೆ ಅಮೃತಕ್ಕೆ ಸಮ ” ಸಿಕ್ಕಾಪಟ್ಟೆ ಮಳೆ ಸುರಿಯುವುದರಿಂದ. ಈ ಸಮಯದಲ್ಲಿ ರೋಗ ರುಜಿನಗಳು ಹರಡುವ ಭಯ ಕಾಡುವುದರಿಂದ ನಿರೋಧ ಶಕ್ತಿ ಹೆಚ್ಚಿಸುವ ಆಹಾರ ವಸ್ತುಗಳನ್ನು ಸೇವಿಸುವುದು ಇಲ್ಲಿನ ಪದ್ಧತಿ.

ವಿಪರೀತ ಮಳೆ ಸುರಿಯುವುದರಿಂದ ಕೃಷಿ ಕಾರ್ಯಗಳು ಕುಂಟುತ್ತಾ ಸಾಗುತ್ತದೆ. ಆಟಿ ತಿಂಗಳು ಕಷ್ಟದ ತಿಂಗಳು ಆದರೂ ಮೆಚ್ಚಿನ ತಿಂಗಳು!

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

6 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

14 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

15 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 day ago