Advertisement
MIRROR FOCUS

ಯಶಸ್ವಿಯಾಗುತ್ತೇನೆ ಎಂಬ ನಿರ್ಧಾರ ನಿಮ್ಮಲ್ಲಿದ್ದರೆ ಸೋಲು ಎಂದಿಗೂ ಬಾರದು – ಡಾ.ಎ ಪಿ ಜೆ ಅಬ್ದುಲ್‌ ಕಲಾಂ

Share
ಯಶಸ್ವಿಯಾಗುತ್ತೇನೆ ಎಂಬ ನಿರ್ಧಾರ ನಿಮ್ಮಲ್ಲಿ ಪ್ರಬಲವಾಗಿದ್ದರೆ ಸೋಲು ಎಂದಿಗೂ ನಿಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ. ” ಅಬ್ದುಲ್ ಕಲಾಂ

ತಮಿಳುನಾಡಿನ ರಾಮೇಶ್ವರದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಹುಡುಗ ಭಾರತದ  ʼಕ್ಷಿಪಣಿಗಳ ಜನಕ’ನಾಗಿ ಪ್ರಸಿದ್ಧರಾದರೆಂದರೆ ಸಣ್ಣ ಸಾಧನೆಯಲ್ಲ. ಈ ಪರಿಶ್ರಮದ ಹಿಂದೆ ಅಪಾರವಾದ ಜೀವನ ಪ್ರೀತಿಯಿದೆ. ಮಾತ್ರವಲ್ಲ ಸದಾ ಕ್ರಿಯಾಶೀಲತೆ, ನಿರಂತರ ಪ್ರಯತ್ನ, ಸ್ಷಷ್ಟವಾದ ಭವಿಷ್ಯದ ಬಗೆಗಿನ ಕನಸುಗಳು ಅವರ ಯಶಸ್ವಿನ ಗುಟ್ಟುಗಳು.
15 ಒಕ್ಟೋಬರ್ 1931 ರಂದು ಜೈನುಲಬ್ದೀನ್ ಹಾಗೂ ಆಶಿಮಾ ದಂಪತಿಗಳ ಪುತ್ರರಾಗಿ ಅಬ್ದುಲ್ ಕಲಾಂರವರು ಜನಿಸಿದರು. ಹೆತ್ತವರ ಬಡತನದ ಅರಿವಿದ್ದ ಕಲಾಂರು ಬೆಳಗ್ಗಿನ ತಮ್ಮ ಅಭ್ಯಾಸವನ್ನು ಮುಗಿಸಿ ಪತ್ರಿಕಾ ವಿತರಣೆಯನ್ನು ಮಾಡಿ ಶಾಲೆಗೆ ಹೋಗುತ್ತಿದ್ದರು.

Advertisement
Advertisement

 

ನೆಗೆಟಿವ್ ಪರಿಸ್ಥಿತಿಗಳಲ್ಲೂ ಪಾಸಿಟಿವ್ ಆಗಿದ್ದರೆ ನೀವು ಪ್ರತಿ ಬಾರಿಯೂ ಗೆಲ್ಲುತ್ತಿರಿ” ಎಂಬ ಮಾತುಗಳನ್ನು ಹೇಳಿದ್ದು ಮಾತ್ರವಲ್ಲ ಬಾಳಿ ತೋರಿಸಿದರು. ತಮ್ಮ ಜೀವನದ ಪ್ರತಿ ಹಂತದಲ್ಲೂ , ಎಲ್ಲಾ ನಡೆಗಳಲ್ಲೂ, ನಿರ್ಧಾರಗಳಲ್ಲೂ ಪಾಸಿಟಿವ್ ಚಿಂತನೆಗಳನ್ನೇ ಪ್ರತಿಪಾದಿಸಿದರು.

ಮೂಲತಃ ಅವರೊಬ್ಬ ವಿಜ್ಞಾನಿ. ಅಂತರಿಕ್ಷಯಾನ ವಿಜ್ಞಾನಿ. ಅವರಲ್ಲೊಬ್ಬ ಉಪನ್ಯಾಸಕನಿದ್ದ, ಗಣಿತಜ್ಞ, ತಮಿಳು ಕವಿ, ಲೇಖಕ, ವೀಣಾವಾದಕ. ನಮ್ಮ ದೇಶದ ಪ್ರತಿಷ್ಠಿತ ಸಂಸ್ಥೆಗಳಾದ DRDO ಹಾಗೂ ಇಸ್ರೋ ಸಂಸ್ಥೆಗಳ ಹೆಮ್ಮೆಯ ವಿಜ್ಞಾನಿ ನಮ್ಮ ಅಬ್ದುಲ್ ಕಲಾಂ. ಭಾರತದ ಮೊದಲ ಉಪಗ್ರಹ ಉಡಾವಣೆಯ ಯೋಜನಾ ನಿರ್ದೇಶಕರಾಗಿ ಯಶಸ್ವಿಯಾದವರು. ಭಾರತದ ಅಣುಬಾಂಬ್ ಹಾಗೂ ಕ್ಷಿಪಣಿಗಳ ಜನಕನೆಂದೇ ಖ್ಯಾತ ರಾದವರು. 1998 ರಲ್ಲಿ ಪೋಖ್ರಾನ್ 2 ನ್ಯೂಕ್ಲಿಯರ್ ಪರೀಕ್ಷೆಯಲ್ಲಿ ಪ್ರಧಾನ ಪಾತ್ರ ನಿರ್ವಹಿಸಿದವರು ಕಲಾಂರವರು. 1997 ರಲ್ಲಿ ಅರ್ಹವಾಗಿಯೇ ಭಾರತರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಮ್ಮ ದೇಶ ಕಂಡ ಕೆಲವೇ ಕೆಲವು ಕ್ರಿಯಾಶೀಲ ರಾಷ್ಟ್ರಪತಿಗಳಲ್ಲಿ ಅಬ್ದುಲ್ ಕಲಾಂರವರು ಒಬ್ಬರು. ತಮ್ಮ ಎಂದಿನ ಸರಳತೆಯನ್ನು ರಾಷ್ಟ್ರಪತಿಯಾಗಿದ್ದಾಗಲೂ ನಿಭಾಯಿಸಿ ಜನಮನ್ನಣೆಗೆ ಪಾತ್ರರಾಗಿದ್ದರು. ತಮ್ಮ ಭಾಷಣಗಳಿಂದ , ಉಪನ್ಯಾಸಗಳಿಂದ ಖ್ಯಾತರಾಗಿದ್ದರು. ತಮ್ಮ ಕೊನೆಯ ಉಸಿರನ್ನು ಕೂಡ ಭಾಷಣ ಮಾಡುತ್ತಿದ್ದಂತೆ ವೇಧಿಕೆಯಲ್ಲೇ ಪ್ರಾಣ ತ್ಯಾಗ ಮಾಡಿದರು.

ಮಕ್ಕಳ ಪ್ರೀತಿಯ ಕಲಾಂ ಅಜ್ಜ ಆಗಿದ್ದರು. ಇಂದು ಅವರ ಹುಟ್ಟು ಹಬ್ಬ. ಅವರ ಹುಟ್ಟುಹಬ್ಬವನ್ನು ಮಕ್ಕಳ ಹಬ್ಬವಾಗಿ ಆಚರಿಸುವುದರಲ್ಲಿ ನಿಜವಾಗಿಯೂ ಒಂದು ಅರ್ಥವಿದೆಯಲ್ಲವೇ.?!
 

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

16 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

17 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

17 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

17 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

17 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

17 hours ago