MIRROR FOCUS

ಯಶಸ್ವಿಯಾಗುತ್ತೇನೆ ಎಂಬ ನಿರ್ಧಾರ ನಿಮ್ಮಲ್ಲಿದ್ದರೆ ಸೋಲು ಎಂದಿಗೂ ಬಾರದು – ಡಾ.ಎ ಪಿ ಜೆ ಅಬ್ದುಲ್‌ ಕಲಾಂ

Share
ಯಶಸ್ವಿಯಾಗುತ್ತೇನೆ ಎಂಬ ನಿರ್ಧಾರ ನಿಮ್ಮಲ್ಲಿ ಪ್ರಬಲವಾಗಿದ್ದರೆ ಸೋಲು ಎಂದಿಗೂ ನಿಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ. ” ಅಬ್ದುಲ್ ಕಲಾಂ

ತಮಿಳುನಾಡಿನ ರಾಮೇಶ್ವರದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಹುಡುಗ ಭಾರತದ  ʼಕ್ಷಿಪಣಿಗಳ ಜನಕ’ನಾಗಿ ಪ್ರಸಿದ್ಧರಾದರೆಂದರೆ ಸಣ್ಣ ಸಾಧನೆಯಲ್ಲ. ಈ ಪರಿಶ್ರಮದ ಹಿಂದೆ ಅಪಾರವಾದ ಜೀವನ ಪ್ರೀತಿಯಿದೆ. ಮಾತ್ರವಲ್ಲ ಸದಾ ಕ್ರಿಯಾಶೀಲತೆ, ನಿರಂತರ ಪ್ರಯತ್ನ, ಸ್ಷಷ್ಟವಾದ ಭವಿಷ್ಯದ ಬಗೆಗಿನ ಕನಸುಗಳು ಅವರ ಯಶಸ್ವಿನ ಗುಟ್ಟುಗಳು.
15 ಒಕ್ಟೋಬರ್ 1931 ರಂದು ಜೈನುಲಬ್ದೀನ್ ಹಾಗೂ ಆಶಿಮಾ ದಂಪತಿಗಳ ಪುತ್ರರಾಗಿ ಅಬ್ದುಲ್ ಕಲಾಂರವರು ಜನಿಸಿದರು. ಹೆತ್ತವರ ಬಡತನದ ಅರಿವಿದ್ದ ಕಲಾಂರು ಬೆಳಗ್ಗಿನ ತಮ್ಮ ಅಭ್ಯಾಸವನ್ನು ಮುಗಿಸಿ ಪತ್ರಿಕಾ ವಿತರಣೆಯನ್ನು ಮಾಡಿ ಶಾಲೆಗೆ ಹೋಗುತ್ತಿದ್ದರು.

 

ನೆಗೆಟಿವ್ ಪರಿಸ್ಥಿತಿಗಳಲ್ಲೂ ಪಾಸಿಟಿವ್ ಆಗಿದ್ದರೆ ನೀವು ಪ್ರತಿ ಬಾರಿಯೂ ಗೆಲ್ಲುತ್ತಿರಿ” ಎಂಬ ಮಾತುಗಳನ್ನು ಹೇಳಿದ್ದು ಮಾತ್ರವಲ್ಲ ಬಾಳಿ ತೋರಿಸಿದರು. ತಮ್ಮ ಜೀವನದ ಪ್ರತಿ ಹಂತದಲ್ಲೂ , ಎಲ್ಲಾ ನಡೆಗಳಲ್ಲೂ, ನಿರ್ಧಾರಗಳಲ್ಲೂ ಪಾಸಿಟಿವ್ ಚಿಂತನೆಗಳನ್ನೇ ಪ್ರತಿಪಾದಿಸಿದರು.

ಮೂಲತಃ ಅವರೊಬ್ಬ ವಿಜ್ಞಾನಿ. ಅಂತರಿಕ್ಷಯಾನ ವಿಜ್ಞಾನಿ. ಅವರಲ್ಲೊಬ್ಬ ಉಪನ್ಯಾಸಕನಿದ್ದ, ಗಣಿತಜ್ಞ, ತಮಿಳು ಕವಿ, ಲೇಖಕ, ವೀಣಾವಾದಕ. ನಮ್ಮ ದೇಶದ ಪ್ರತಿಷ್ಠಿತ ಸಂಸ್ಥೆಗಳಾದ DRDO ಹಾಗೂ ಇಸ್ರೋ ಸಂಸ್ಥೆಗಳ ಹೆಮ್ಮೆಯ ವಿಜ್ಞಾನಿ ನಮ್ಮ ಅಬ್ದುಲ್ ಕಲಾಂ. ಭಾರತದ ಮೊದಲ ಉಪಗ್ರಹ ಉಡಾವಣೆಯ ಯೋಜನಾ ನಿರ್ದೇಶಕರಾಗಿ ಯಶಸ್ವಿಯಾದವರು. ಭಾರತದ ಅಣುಬಾಂಬ್ ಹಾಗೂ ಕ್ಷಿಪಣಿಗಳ ಜನಕನೆಂದೇ ಖ್ಯಾತ ರಾದವರು. 1998 ರಲ್ಲಿ ಪೋಖ್ರಾನ್ 2 ನ್ಯೂಕ್ಲಿಯರ್ ಪರೀಕ್ಷೆಯಲ್ಲಿ ಪ್ರಧಾನ ಪಾತ್ರ ನಿರ್ವಹಿಸಿದವರು ಕಲಾಂರವರು. 1997 ರಲ್ಲಿ ಅರ್ಹವಾಗಿಯೇ ಭಾರತರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಮ್ಮ ದೇಶ ಕಂಡ ಕೆಲವೇ ಕೆಲವು ಕ್ರಿಯಾಶೀಲ ರಾಷ್ಟ್ರಪತಿಗಳಲ್ಲಿ ಅಬ್ದುಲ್ ಕಲಾಂರವರು ಒಬ್ಬರು. ತಮ್ಮ ಎಂದಿನ ಸರಳತೆಯನ್ನು ರಾಷ್ಟ್ರಪತಿಯಾಗಿದ್ದಾಗಲೂ ನಿಭಾಯಿಸಿ ಜನಮನ್ನಣೆಗೆ ಪಾತ್ರರಾಗಿದ್ದರು. ತಮ್ಮ ಭಾಷಣಗಳಿಂದ , ಉಪನ್ಯಾಸಗಳಿಂದ ಖ್ಯಾತರಾಗಿದ್ದರು. ತಮ್ಮ ಕೊನೆಯ ಉಸಿರನ್ನು ಕೂಡ ಭಾಷಣ ಮಾಡುತ್ತಿದ್ದಂತೆ ವೇಧಿಕೆಯಲ್ಲೇ ಪ್ರಾಣ ತ್ಯಾಗ ಮಾಡಿದರು.

ಮಕ್ಕಳ ಪ್ರೀತಿಯ ಕಲಾಂ ಅಜ್ಜ ಆಗಿದ್ದರು. ಇಂದು ಅವರ ಹುಟ್ಟು ಹಬ್ಬ. ಅವರ ಹುಟ್ಟುಹಬ್ಬವನ್ನು ಮಕ್ಕಳ ಹಬ್ಬವಾಗಿ ಆಚರಿಸುವುದರಲ್ಲಿ ನಿಜವಾಗಿಯೂ ಒಂದು ಅರ್ಥವಿದೆಯಲ್ಲವೇ.?!
 

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

42 minutes ago

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

14 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

14 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

1 day ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

1 day ago