Advertisement
MIRROR FOCUS

ಯಶಸ್ವಿಯಾಗುತ್ತೇನೆ ಎಂಬ ನಿರ್ಧಾರ ನಿಮ್ಮಲ್ಲಿದ್ದರೆ ಸೋಲು ಎಂದಿಗೂ ಬಾರದು – ಡಾ.ಎ ಪಿ ಜೆ ಅಬ್ದುಲ್‌ ಕಲಾಂ

Share
ಯಶಸ್ವಿಯಾಗುತ್ತೇನೆ ಎಂಬ ನಿರ್ಧಾರ ನಿಮ್ಮಲ್ಲಿ ಪ್ರಬಲವಾಗಿದ್ದರೆ ಸೋಲು ಎಂದಿಗೂ ನಿಮ್ಮನ್ನು ಹಿಮ್ಮೆಟ್ಟಿಸುವುದಿಲ್ಲ. ” ಅಬ್ದುಲ್ ಕಲಾಂ

ತಮಿಳುನಾಡಿನ ರಾಮೇಶ್ವರದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಹುಡುಗ ಭಾರತದ  ʼಕ್ಷಿಪಣಿಗಳ ಜನಕ’ನಾಗಿ ಪ್ರಸಿದ್ಧರಾದರೆಂದರೆ ಸಣ್ಣ ಸಾಧನೆಯಲ್ಲ. ಈ ಪರಿಶ್ರಮದ ಹಿಂದೆ ಅಪಾರವಾದ ಜೀವನ ಪ್ರೀತಿಯಿದೆ. ಮಾತ್ರವಲ್ಲ ಸದಾ ಕ್ರಿಯಾಶೀಲತೆ, ನಿರಂತರ ಪ್ರಯತ್ನ, ಸ್ಷಷ್ಟವಾದ ಭವಿಷ್ಯದ ಬಗೆಗಿನ ಕನಸುಗಳು ಅವರ ಯಶಸ್ವಿನ ಗುಟ್ಟುಗಳು.
15 ಒಕ್ಟೋಬರ್ 1931 ರಂದು ಜೈನುಲಬ್ದೀನ್ ಹಾಗೂ ಆಶಿಮಾ ದಂಪತಿಗಳ ಪುತ್ರರಾಗಿ ಅಬ್ದುಲ್ ಕಲಾಂರವರು ಜನಿಸಿದರು. ಹೆತ್ತವರ ಬಡತನದ ಅರಿವಿದ್ದ ಕಲಾಂರು ಬೆಳಗ್ಗಿನ ತಮ್ಮ ಅಭ್ಯಾಸವನ್ನು ಮುಗಿಸಿ ಪತ್ರಿಕಾ ವಿತರಣೆಯನ್ನು ಮಾಡಿ ಶಾಲೆಗೆ ಹೋಗುತ್ತಿದ್ದರು.

 

ನೆಗೆಟಿವ್ ಪರಿಸ್ಥಿತಿಗಳಲ್ಲೂ ಪಾಸಿಟಿವ್ ಆಗಿದ್ದರೆ ನೀವು ಪ್ರತಿ ಬಾರಿಯೂ ಗೆಲ್ಲುತ್ತಿರಿ” ಎಂಬ ಮಾತುಗಳನ್ನು ಹೇಳಿದ್ದು ಮಾತ್ರವಲ್ಲ ಬಾಳಿ ತೋರಿಸಿದರು. ತಮ್ಮ ಜೀವನದ ಪ್ರತಿ ಹಂತದಲ್ಲೂ , ಎಲ್ಲಾ ನಡೆಗಳಲ್ಲೂ, ನಿರ್ಧಾರಗಳಲ್ಲೂ ಪಾಸಿಟಿವ್ ಚಿಂತನೆಗಳನ್ನೇ ಪ್ರತಿಪಾದಿಸಿದರು.

ಮೂಲತಃ ಅವರೊಬ್ಬ ವಿಜ್ಞಾನಿ. ಅಂತರಿಕ್ಷಯಾನ ವಿಜ್ಞಾನಿ. ಅವರಲ್ಲೊಬ್ಬ ಉಪನ್ಯಾಸಕನಿದ್ದ, ಗಣಿತಜ್ಞ, ತಮಿಳು ಕವಿ, ಲೇಖಕ, ವೀಣಾವಾದಕ. ನಮ್ಮ ದೇಶದ ಪ್ರತಿಷ್ಠಿತ ಸಂಸ್ಥೆಗಳಾದ DRDO ಹಾಗೂ ಇಸ್ರೋ ಸಂಸ್ಥೆಗಳ ಹೆಮ್ಮೆಯ ವಿಜ್ಞಾನಿ ನಮ್ಮ ಅಬ್ದುಲ್ ಕಲಾಂ. ಭಾರತದ ಮೊದಲ ಉಪಗ್ರಹ ಉಡಾವಣೆಯ ಯೋಜನಾ ನಿರ್ದೇಶಕರಾಗಿ ಯಶಸ್ವಿಯಾದವರು. ಭಾರತದ ಅಣುಬಾಂಬ್ ಹಾಗೂ ಕ್ಷಿಪಣಿಗಳ ಜನಕನೆಂದೇ ಖ್ಯಾತ ರಾದವರು. 1998 ರಲ್ಲಿ ಪೋಖ್ರಾನ್ 2 ನ್ಯೂಕ್ಲಿಯರ್ ಪರೀಕ್ಷೆಯಲ್ಲಿ ಪ್ರಧಾನ ಪಾತ್ರ ನಿರ್ವಹಿಸಿದವರು ಕಲಾಂರವರು. 1997 ರಲ್ಲಿ ಅರ್ಹವಾಗಿಯೇ ಭಾರತರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಮ್ಮ ದೇಶ ಕಂಡ ಕೆಲವೇ ಕೆಲವು ಕ್ರಿಯಾಶೀಲ ರಾಷ್ಟ್ರಪತಿಗಳಲ್ಲಿ ಅಬ್ದುಲ್ ಕಲಾಂರವರು ಒಬ್ಬರು. ತಮ್ಮ ಎಂದಿನ ಸರಳತೆಯನ್ನು ರಾಷ್ಟ್ರಪತಿಯಾಗಿದ್ದಾಗಲೂ ನಿಭಾಯಿಸಿ ಜನಮನ್ನಣೆಗೆ ಪಾತ್ರರಾಗಿದ್ದರು. ತಮ್ಮ ಭಾಷಣಗಳಿಂದ , ಉಪನ್ಯಾಸಗಳಿಂದ ಖ್ಯಾತರಾಗಿದ್ದರು. ತಮ್ಮ ಕೊನೆಯ ಉಸಿರನ್ನು ಕೂಡ ಭಾಷಣ ಮಾಡುತ್ತಿದ್ದಂತೆ ವೇಧಿಕೆಯಲ್ಲೇ ಪ್ರಾಣ ತ್ಯಾಗ ಮಾಡಿದರು.

ಮಕ್ಕಳ ಪ್ರೀತಿಯ ಕಲಾಂ ಅಜ್ಜ ಆಗಿದ್ದರು. ಇಂದು ಅವರ ಹುಟ್ಟು ಹಬ್ಬ. ಅವರ ಹುಟ್ಟುಹಬ್ಬವನ್ನು ಮಕ್ಕಳ ಹಬ್ಬವಾಗಿ ಆಚರಿಸುವುದರಲ್ಲಿ ನಿಜವಾಗಿಯೂ ಒಂದು ಅರ್ಥವಿದೆಯಲ್ಲವೇ.?!
 

#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago