ವಂಚನೆ ಪ್ರಕರಣ | ಚೈತ್ರಾ ಕುಂದಾಪುರ ಟೀಂನ ಅಭಿನವ ಹಾಲಶ್ರೀ ಬಂಧನ |

September 19, 2023
12:19 PM
ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.

ಬಿಜೆಪಿಯಿಂದ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಟೀಂನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು  ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು.ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror