ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಟೀಂನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು.ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…