ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಟೀಂನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು.ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…