Advertisement
Opinion

ಅಭ್ಯಂಗ -ಮಸಾಜ್…. ಇದು ಪಂಚಕರ್ಮ ಚಿಕಿತ್ಸೆಯ ಒಂದು ವಿಧಾನ | ಇದರಿಂದಾಗುವ ಪ್ರಯೋಜನಗಳೇನು..? |

Share

ಆಧುನಿಕ ಜೀವನ ಶೈಲಿ(Modern life style), ಸತ್ವವಲ್ಲದ ಆಹಾರ, ಶ್ರಮವಿಲ್ಲದ ದುಡಿಮೆ, ಇದರಿಂದಾಗಿ ಕೀಲು ನೋವು ಹಾಗೂ ಸಂಧಿವಾತ ಕಾಯಿಲೆಗಳು(Joint pain and rheumatic diseases) ಹೆಚ್ಚಾಗುತ್ತಿದ್ದು, ವಯಸ್ಸಿನ ಭೇದವಿಲ್ಲದೆ ಎಲ್ಲರನ್ನೂ ಬಾಧಿಸುತ್ತಿದೆ. ಈ ಕಾಯಿಲೆಗಳು ತೀವ್ರ ಸ್ವರೂಪಗೊಂಡಾಗ ಅತಿಯಾದ ನೋವು ಹಾಗೂ ಹಿಂಸೆ ಅನುಭವಿಸಬೇಕಾಗುತ್ತದೆ. ಈ ಸ್ಥಿತಿಯಲ್ಲಿ ರೋಗಿಗೆ ದಿನನಿತ್ಯದ ಕಾರ್ಯಗಳಿಗೆ ಹಾಗೂ ಚಟುವಟಿಕೆಗಳಿಗೆ ಬೇರೆಯವರನ್ನು ಅವಲಂಬಿಸುವ ಅನಿವಾರ್ಯತೆ ಬಂದರೂ ಬರಬಹುದು.

ಈ ಸಮಸ್ಯೆಗಳಿಂದ ಮುಕ್ತರಾಗಲು ಅಭ್ಯಂಗ ಚಿಕಿತ್ಸೆ(Abhyanga therapy)ಯನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಇದೊಂದು ಸಾಮಾನ್ಯವಾದ ಪಂಚಕರ್ಮದ(Panchakarma) ಒಂದು ಚಿಕಿತ್ಸಾ ವಿಧಾನವಾಗಿದೆ. ಸರ್ವಾಂಗ ಮತ್ತು ಏಕಾಂಗ ಅಥವಾ ಸ್ಥಾನಿಕ ಅಭ್ಯಂಗ ಅಂತ ಎರಡು ವಿಧಗಳನ್ನಾಗಿ ಈ ಚಿಕಿತ್ಸೆ ನೀಡಲಾಗುವುದು. ಯಾವ ಭಾಗ ತೊಂದರೆಗೆ ಒಳಪಟ್ಟಿದೆಯೋ ಅಥವಾ ಎಲ್ಲೆಲ್ಲಿ ನೋವು ಗಳಿವೆಯೋ ಆ ಜಾಗಕ್ಕೆ ಮಾತ್ರ ಅಭ್ಯಂಗ ಮಾಡಬಹುದು ಅದನ್ನು ಏಕಾಂಗ ಅಥವಾ ಸ್ಥಾನಿಕ ಅಭ್ಯಂಗ ಎನ್ನುತ್ತೇವೆ. ಸರ್ವಾಂಗ ಅಭ್ಯಂಗ ಅಂದರೆ ಇಡೀ ದೇಹಕ್ಕೆ ಮಸಾಜ್ ಮಾಡುವಂತದ್ದು. ರೋಗದ ತೀವ್ರತೆಗೆ ಅನುಸಾರವಾಗಿ ಆಯುರ್ವೇದ ಗಿಡ ಮೂಲಿಕೆಗಳಿಂದ ತಯಾರಿಸಿದ ತೈಲಗಳನ್ನು ಅಭ್ಯಂಗ ಮಾಡಲು ಉಪಯೋಗಿಸಲಾಗುತ್ತದೆ. ಆಯುರ್ವೇದ ಚಿಕಿತ್ಸಾ ಪದ್ದತಿಯಲ್ಲಿ ಇದು ಎಲ್ಲಾ ಪಂಚಕರ್ಮ ಚಿಕಿತ್ಸೆಯ ಪೂರ್ವ ಕರ್ಮವಾಗಿ ಬಳಸಲಾಗುತ್ತದೆ.

ಅಭ್ಯಂಗವು ಕೇವಲ ನೋವು ನಿವಾರಕವಲ್ಲದೇ ಸಾಮಾನ್ಯ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಾಗೂ ರೋಗ ಬರದಂತೆ ಮಾಡಬಹುದಾದ ಸರಳ ಚಿಕಿತ್ಸಾ ವಿಧಾನ. ಅಭ್ಯಂಗ ಮಾಡಿಕೊಳ್ಳುವುದರಿಂದ ಮೆದುಳಿನ ನರಗಳು ಪ್ರಚೋದಿತಗೊಂಡು ತಮ್ಮ ಕಾರ್ಯವನ್ನು ತ್ವರಿತಗೊಳಿಸುತ್ತದೆ ಆದ್ದರಿಂದ ಇದನ್ನು Gate controll Therapy ಎಂದು ಹೇಳಿದ್ದಾರೆ. ಕೇವಲ ಶಾರೀರಿಕ ಸಮಸ್ಯೆಗಳನ್ನು ಹೋಗಲಾಡಿಸುವುದಲ್ಲದೆ ಮಾನಸಿಕ ಒತ್ತಡವನ್ನು(Mental stress) ಕಡಿಮೆ ಮಾಡುವುದರಲ್ಲಿ ಅಭ್ಯಂಗವು ಮಹತ್ತರ ಪಾತ್ರವನ್ನು ವಹಿಸುತ್ತದೆ. ಈ ಚಿಕಿತ್ಸೆಯನ್ನು ಯಾವ ವಯಸ್ಸಿನಲ್ಲೂ ಮಾಡಬಹುದು ಸಾಮಾನ್ಯವಾಗಿ 30 ರಿಂದ 45 ನಿಮಿಷದವರೆಗೆ ಮಾಡಲಾಗುತ್ತದೆ ಇದೇ ರೀತಿ ಶಿರೋಭ್ಯಂಗ, ಪಾದಅಭ್ಯಂಗಗಳನ್ನು ಮಾಡಲಾಗುವುದು.

ಅಭ್ಯಂಗ….ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಚರ್ಮವನ್ನು ಮೃದುವಾಗಿರಿಸುವುದರ ಜೊತೆಗೆ ಸೌಂದರ್ಯವನ್ನು ಕಾಪಾಡುತ್ತದೆ. ಸಾಮಾನ್ಯವಾಗಿ ಕಂಡುಬರುವಂತಹ ಪಕ್ಷಾಘಾತ, ಬೆನ್ನು ನೋವು, ಸಂಧಿವಾತ ಮೊದಲಾದ ವಾತರೋಗಗಳಲ್ಲಿ ಅಭ್ಯಂಗ ಚಿಕಿತ್ಸೆಯು ಬಹಳ ಉತ್ತಮವಾದ ವಿಧಾನವಾಗಿದೆ. ಕೇವಲ ರೋಗಿಗಳಲ್ಲದೆ ಆರೋಗ್ಯವಂತರು ಈ ಚಿಕಿತ್ಸೆಯನ್ನು ರೋಗ ಬರದಂತೆಯೂ ಸಹ ತೆಗೆದುಕೊಳ್ಳಬಹುದು. ಎಲ್ಲ ಪಂಚಕರ್ಮ ಚಿಕಿತ್ಸೆಯನ್ನು ವೈದ್ಯರೊಂದಿಗೆ ಸಮಾಲೋಚಿಸಿ ನುರಿತ ವೈದ್ಯರ ಸಮ್ಮುಖದಲ್ಲಿ ತೆಗೆದುಕೊಳ್ಳುವುದು ಉತ್ತಮ.

ಬರಹ :
ಡಾ.ಜ್ಯೋತಿ
, ಆಯುರ್ವೇದ ವೈದ್ಯರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

2 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

3 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

12 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

12 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

13 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

22 hours ago