Advertisement
Opinion

ಅಭ್ಯಂಗ -ಮಸಾಜ್…. ಇದು ಪಂಚಕರ್ಮ ಚಿಕಿತ್ಸೆಯ ಒಂದು ವಿಧಾನ | ಇದರಿಂದಾಗುವ ಪ್ರಯೋಜನಗಳೇನು..? |

Share

ಆಧುನಿಕ ಜೀವನ ಶೈಲಿ(Modern life style), ಸತ್ವವಲ್ಲದ ಆಹಾರ, ಶ್ರಮವಿಲ್ಲದ ದುಡಿಮೆ, ಇದರಿಂದಾಗಿ ಕೀಲು ನೋವು ಹಾಗೂ ಸಂಧಿವಾತ ಕಾಯಿಲೆಗಳು(Joint pain and rheumatic diseases) ಹೆಚ್ಚಾಗುತ್ತಿದ್ದು, ವಯಸ್ಸಿನ ಭೇದವಿಲ್ಲದೆ ಎಲ್ಲರನ್ನೂ ಬಾಧಿಸುತ್ತಿದೆ. ಈ ಕಾಯಿಲೆಗಳು ತೀವ್ರ ಸ್ವರೂಪಗೊಂಡಾಗ ಅತಿಯಾದ ನೋವು ಹಾಗೂ ಹಿಂಸೆ ಅನುಭವಿಸಬೇಕಾಗುತ್ತದೆ. ಈ ಸ್ಥಿತಿಯಲ್ಲಿ ರೋಗಿಗೆ ದಿನನಿತ್ಯದ ಕಾರ್ಯಗಳಿಗೆ ಹಾಗೂ ಚಟುವಟಿಕೆಗಳಿಗೆ ಬೇರೆಯವರನ್ನು ಅವಲಂಬಿಸುವ ಅನಿವಾರ್ಯತೆ ಬಂದರೂ ಬರಬಹುದು.

ಈ ಸಮಸ್ಯೆಗಳಿಂದ ಮುಕ್ತರಾಗಲು ಅಭ್ಯಂಗ ಚಿಕಿತ್ಸೆ(Abhyanga therapy)ಯನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಇದೊಂದು ಸಾಮಾನ್ಯವಾದ ಪಂಚಕರ್ಮದ(Panchakarma) ಒಂದು ಚಿಕಿತ್ಸಾ ವಿಧಾನವಾಗಿದೆ. ಸರ್ವಾಂಗ ಮತ್ತು ಏಕಾಂಗ ಅಥವಾ ಸ್ಥಾನಿಕ ಅಭ್ಯಂಗ ಅಂತ ಎರಡು ವಿಧಗಳನ್ನಾಗಿ ಈ ಚಿಕಿತ್ಸೆ ನೀಡಲಾಗುವುದು. ಯಾವ ಭಾಗ ತೊಂದರೆಗೆ ಒಳಪಟ್ಟಿದೆಯೋ ಅಥವಾ ಎಲ್ಲೆಲ್ಲಿ ನೋವು ಗಳಿವೆಯೋ ಆ ಜಾಗಕ್ಕೆ ಮಾತ್ರ ಅಭ್ಯಂಗ ಮಾಡಬಹುದು ಅದನ್ನು ಏಕಾಂಗ ಅಥವಾ ಸ್ಥಾನಿಕ ಅಭ್ಯಂಗ ಎನ್ನುತ್ತೇವೆ. ಸರ್ವಾಂಗ ಅಭ್ಯಂಗ ಅಂದರೆ ಇಡೀ ದೇಹಕ್ಕೆ ಮಸಾಜ್ ಮಾಡುವಂತದ್ದು. ರೋಗದ ತೀವ್ರತೆಗೆ ಅನುಸಾರವಾಗಿ ಆಯುರ್ವೇದ ಗಿಡ ಮೂಲಿಕೆಗಳಿಂದ ತಯಾರಿಸಿದ ತೈಲಗಳನ್ನು ಅಭ್ಯಂಗ ಮಾಡಲು ಉಪಯೋಗಿಸಲಾಗುತ್ತದೆ. ಆಯುರ್ವೇದ ಚಿಕಿತ್ಸಾ ಪದ್ದತಿಯಲ್ಲಿ ಇದು ಎಲ್ಲಾ ಪಂಚಕರ್ಮ ಚಿಕಿತ್ಸೆಯ ಪೂರ್ವ ಕರ್ಮವಾಗಿ ಬಳಸಲಾಗುತ್ತದೆ.

Advertisement

ಅಭ್ಯಂಗವು ಕೇವಲ ನೋವು ನಿವಾರಕವಲ್ಲದೇ ಸಾಮಾನ್ಯ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಾಗೂ ರೋಗ ಬರದಂತೆ ಮಾಡಬಹುದಾದ ಸರಳ ಚಿಕಿತ್ಸಾ ವಿಧಾನ. ಅಭ್ಯಂಗ ಮಾಡಿಕೊಳ್ಳುವುದರಿಂದ ಮೆದುಳಿನ ನರಗಳು ಪ್ರಚೋದಿತಗೊಂಡು ತಮ್ಮ ಕಾರ್ಯವನ್ನು ತ್ವರಿತಗೊಳಿಸುತ್ತದೆ ಆದ್ದರಿಂದ ಇದನ್ನು Gate controll Therapy ಎಂದು ಹೇಳಿದ್ದಾರೆ. ಕೇವಲ ಶಾರೀರಿಕ ಸಮಸ್ಯೆಗಳನ್ನು ಹೋಗಲಾಡಿಸುವುದಲ್ಲದೆ ಮಾನಸಿಕ ಒತ್ತಡವನ್ನು(Mental stress) ಕಡಿಮೆ ಮಾಡುವುದರಲ್ಲಿ ಅಭ್ಯಂಗವು ಮಹತ್ತರ ಪಾತ್ರವನ್ನು ವಹಿಸುತ್ತದೆ. ಈ ಚಿಕಿತ್ಸೆಯನ್ನು ಯಾವ ವಯಸ್ಸಿನಲ್ಲೂ ಮಾಡಬಹುದು ಸಾಮಾನ್ಯವಾಗಿ 30 ರಿಂದ 45 ನಿಮಿಷದವರೆಗೆ ಮಾಡಲಾಗುತ್ತದೆ ಇದೇ ರೀತಿ ಶಿರೋಭ್ಯಂಗ, ಪಾದಅಭ್ಯಂಗಗಳನ್ನು ಮಾಡಲಾಗುವುದು.

ಅಭ್ಯಂಗ….ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಚರ್ಮವನ್ನು ಮೃದುವಾಗಿರಿಸುವುದರ ಜೊತೆಗೆ ಸೌಂದರ್ಯವನ್ನು ಕಾಪಾಡುತ್ತದೆ. ಸಾಮಾನ್ಯವಾಗಿ ಕಂಡುಬರುವಂತಹ ಪಕ್ಷಾಘಾತ, ಬೆನ್ನು ನೋವು, ಸಂಧಿವಾತ ಮೊದಲಾದ ವಾತರೋಗಗಳಲ್ಲಿ ಅಭ್ಯಂಗ ಚಿಕಿತ್ಸೆಯು ಬಹಳ ಉತ್ತಮವಾದ ವಿಧಾನವಾಗಿದೆ. ಕೇವಲ ರೋಗಿಗಳಲ್ಲದೆ ಆರೋಗ್ಯವಂತರು ಈ ಚಿಕಿತ್ಸೆಯನ್ನು ರೋಗ ಬರದಂತೆಯೂ ಸಹ ತೆಗೆದುಕೊಳ್ಳಬಹುದು. ಎಲ್ಲ ಪಂಚಕರ್ಮ ಚಿಕಿತ್ಸೆಯನ್ನು ವೈದ್ಯರೊಂದಿಗೆ ಸಮಾಲೋಚಿಸಿ ನುರಿತ ವೈದ್ಯರ ಸಮ್ಮುಖದಲ್ಲಿ ತೆಗೆದುಕೊಳ್ಳುವುದು ಉತ್ತಮ.

Advertisement
ಬರಹ :
ಡಾ.ಜ್ಯೋತಿ
, ಆಯುರ್ವೇದ ವೈದ್ಯರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

18 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

20 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago