Article 370 ಅನ್ನು ಮೋದಿ ಸರ್ಕಾರ(Modi Govt) ರದ್ದು ಪಡಿಸಿ ಈಗಾಗಲೇ ವರ್ಷಗಳೇ ಕಳೆದಿದೆ. ಆದರೆ ಈ ಬಾರಿಯ ಲೋಕಸಭೆ ಚುನಾವಣೆಗೆ(Lok sabha Election) ಪ್ರಮುಖ ವಿಷಯವಾಗಿ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರ(BJP Govt) ರದ್ದುಪಡಿಸಿದ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕೆ ಡಾ.ಬಿ.ಆರ್ ಅಂಬೇಡ್ಕರ್ (Dr.BR Ambedkar) ಅವರ ಆತ್ಮ ನನ್ನನ್ನು ಆಶೀರ್ವದಿಸುತ್ತಿರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಬಿಜೆಪಿ (BJP) ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವವಾಗಿದೆ. ಈಗ ಬಾಬಾಸಾಹೇಬ್ ಅಂಬೇಡ್ಕರ್ ಅವರೇ ಬಂದರೂ ಸಂವಿಧಾನವನ್ನು ರದ್ದುಪಡಿಸಲು ಸಾಧ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಹೇಳುವ ಮೂಲಕ ಪ್ರತಿಪಕ್ಷಗಳು ಜನರನ್ನು ಮೂರ್ಖರನ್ನಾಗಿಸುತ್ತಿವೆ. ಕಾಂಗ್ರೆಸ್ (Congress) ತುರ್ತು ಪರಿಸ್ಥಿತಿಯನ್ನು ಹೇರಿ ಸಂವಿಧಾನವನ್ನು ನಾಶಪಡಿಸಲು ಪ್ರಯತ್ನಿಸಿತ್ತು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬರಲಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರು ಈಗ ಸಾಂವಿಧಾನಿಕ ಹಕ್ಕುಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಅವರನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಡೆಗಣಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ನಿಮ್ಮ ಕನಸು ನನ್ನ ಸಂಕಲ್ಪವಾಗಿದೆ. ನನ್ನ ಪ್ರತಿಯೊಂದು ಕ್ಷಣವೂ ನಿಮ್ಮ ಕಲ್ಯಾಣ ಮತ್ತು ದೇಶದ ಪ್ರಗತಿಗಾಗಿ ಮೀಸಲಿಡಲಾಗಿದೆ ಎಂದಿದ್ದಾರೆ.
ಅಂಬೇಡ್ಕರ್ ಏನು ಹೇಳಿದ್ದರು?: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಅಂಬೇಡ್ಕರ್ ವಿರೋಧಿಸಿದ್ದರು. ವಿಶೇಷ ಸ್ಥಾನಮಾನ ನೀಡಿದರೆ ಭಾರತದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಆಗುತ್ತದೆ ಎಂದು ಹೇಳಿದ್ದರು. ಆದರೆ ಜವಾಹಾರಲಾಲ್ ನೆಹರು ಅವರು ವಿಶೇಷ ಸ್ಥಾನ ಪರ ಮಾತನಾಡಿದ್ದರು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…