Advertisement
MIRROR FOCUS

ದೇಶದಲ್ಲಿ ಸುಮಾರು 70 ರಷ್ಟು ಜನರು ಕೃಷಿ ಅವಲಂಬಿತರು | ಸಿರಿಧಾನ್ಯ ಬೆಳೆಯಲು ರೈತರು ಒಲವು ತೋರಿಸಿ |

Share

ಭಾರತ ದೇಶದಲ್ಲಿ ಸುಮಾರು  ಶೇಕಡಾ 70 ರಷ್ಟು ಜನರು ಕೃಷಿಯನ್ನು ಅವಲಂಭಿಸಿದ್ದಾರೆ.  ಈ ಜಗತ್ತಿನಲ್ಲಿ ಸಿರಿದಾನ್ಯಗಳ ಬಳಕೆ ಹೆಚ್ಚಾಗಬೇಕು ಮತ್ತು ಇಂದಿನ ಮಕ್ಕಳು ಅವುಗಳನ್ನು ಉಪಯೋಗಿಸಿದಾಗ ಆರೋಗ್ಯದ ಸಮಸ್ಯೆಗಳನ್ನು ಸುಧಾರಿಸಲು ಸಹಕಾರಿಯಾಗುತ್ತದೆ ಎಂದು  ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು. 

Advertisement
Advertisement
Advertisement

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ವತಿಯಿಂದ  ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ವಿಶ್ವ ಆಹಾರ ದಿನಾಚರಣೆ- 2024ರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

Advertisement

1960 ರಿಂದ 1965 ರ  ಅವಧಿಯಲ್ಲಿ ನಾನು ಪ್ರೌಢಶಾಲಾ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ 4 ನಾಲ್ಕು ವರ್ಷಗಳ ಕಾಲ ಮಳೆ ಅಭಾವವಾಗಿತ್ತು ಅಂದು ನಾನು ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದೆ ಎಂದರು.  ನಂತರ ಅಂದಿನ ಪ್ರಧಾನಿ ಲಾಲ ಬಹಾದೂರ್ ಶಾಸ್ತ್ರಿ ಅವರು ದೇಶದಲ್ಲಿ ಆಹಾರದ ಕೊರತೆ ಇದ್ದಾಗ ಜನರು ಒಂದು ಒತ್ತಿನ ಊಟವನ್ನು ಬಿಡಬೇಕು ಎಂಬ ಕರೆ ನೀಡಿದ್ದರು. ನಂತರ ಎಲ್ಲರೂ ಅದನ್ನು ಅನುಸರಿಸಿ ಆಹಾರದ ಅಭಾವವನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಿದ್ದರು.  ಪ್ರಸ್ತುತದ ನಮ್ಮ ಭಾರತ ದೇಶದಲ್ಲಿ ಮೂರು ವರ್ಷಗಳಿಗೆ ಆಗುವಷ್ಟು ಆಹಾರ ದವಸದಾನ್ಯಗಳನ್ನು ನಾವು ಶೇಖರಣೆ ಮಾಡಿದ್ದೇವೆ  ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವಷ್ಟು ಬಲಿಷ್ಠ ವಾಗಿದ್ದೇವೆ. ಸಿರಿದಾನ್ಯಗಳ ಬೆಳೆಯುವ ಪ್ರಮಾಣ ಕಡಿಮೆಯಾಗಿದ್ದು,   ಇವನ್ನು ರೈತರು ತಮ್ಮ ಜಮೀನಿನಲ್ಲಿ ನವಣೆ, ಆರ್ಕಾ,ರಾಗಿ ಭತ್ತ, ಸಜ್ಜೆ  ಮುಂತಾದ ಧಾನ್ಯಗಳನ್ನು ಬೆಳೆಯುವ ಕಡೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು

ವಿಶ್ವ ಆಹಾರ ದಿನ (World Food Day) ವಿಶ್ವಾದ್ಯಂತ ಅಕ್ಟೋಬರ್ 16ರಂದು ಆಚರಿಸಲಾಗುತ್ತದೆ. 1945ರಲ್ಲಿ ಸಂಯುಕ್ತ ರಾಷ್ಟ್ರಗಳ ಆಹಾರ ಮತ್ತು ಕೃಷಿ ಸಂಘಟನೆಯ (FAO) ಸ್ಥಾಪನೆಯನ್ನು ಗೌರವಿಸುವುದಾಗಿ ಈ ದಿನವನ್ನು ನಿಶ್ಚಿತಗೊಳಿಸಲಾಗಿದೆ ಎಂದರು.  ಆಹಾರದ ಮಹತ್ವ, ಜನರ ಭಕ್ಷ್ಯಮಾನದ ಹಕ್ಕು, ಹಸಿವು ಹಾಗೂ ದಾರಿದ್ರ್ಯ ನಿರ್ಮೂಲನೆಗೆ ಜಾಗೃತಿ ಮೂಡಿಸುವುದಾಗಿದೆ  ಎಂದರು.

Advertisement

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ್, ಸಿಂಡಿಕೇಟ್ ಸದಸ್ಯರಾದ ಪ್ರಭಾಕರ ಶೆಟ್ಟಿ,ಹರೀಶ್,ಚಂದ್ರೇಗೌಡ, ನಾರಾಯಣಸ್ವಾಮಿ, ಡೀನ್ ಪ್ರಕಾಶ್, ಸಂಶೋಧನಾ ನಿರ್ದೇಶಕ ಶಿವರಾಮ್, ಪ್ರಾಧ್ಯಾಪಕ ಉಷಾ ರವೀಂದ್ರ, ಕಲ್ಪನಾ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭಾರತೀಯ…

5 hours ago

ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |

ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ…

5 hours ago

ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು

ಐದು ಎಕರೆಯಲ್ಲಿ ದ್ರಾಕ್ಷಿ ಬೆಳೆದಿದ್ದು, ಅತಿಯಾದ ಮಳೆಯಿಂದ ಫಸಲು ನಾಶವಾಗಿದೆ ಎನ್ನುತ್ತಾರೆ ರೈತ…

5 hours ago

6 ಜಿ ತಂತ್ರಜ್ಞಾನದತ್ತ ಮುನ್ನುಗ್ಗುತ್ತಿರುವ ಭಾರತ | ಹಳ್ಳಿಗಳಿಗೂ ವೇಗ ಇಂಟರ್ನೆಟ್‌ ಏಕೆ ಅಗತ್ಯ..? | ಬಿಎಸ್‌ಎನ್‌ಎಲ್‌ ಒಳಗೆ ಕೆಲಸ ಹೇಗೆ ನಡೆಯುತ್ತಿದೆ…?

ಭಾರತದಲ್ಲಿ ಮೊಬೈಲ್ ಸಂಪರ್ಕಗಳು 904 ಮಿಲಿಯನ್‌ನಿಂದ 1.16 ಬಿಲಿಯನ್‌ಗೆ ಏರಿದೆ, ಬ್ರಾಡ್‌ಬ್ಯಾಂಡ್ ಬಳಕೆದಾರರು…

5 hours ago

ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರದ ನಿರ್ಧಾರ

ಹೋಬಳಿಗೊಂದು ವಸತಿ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

14 hours ago

ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವ | ಸಹಸ್ರಾರು ಯಾತ್ರಾರ್ಥಿಗಳಿಂದ ಪುಣ್ಯಸ್ನಾನ

ಕೊಡಗು ಜಿಲ್ಲೆಯ ತಲಕಾವೇರಿ ಕ್ಷೇತ್ರದಲ್ಲಿ ಇಂದು ಬೆಳಗ್ಗೆ 7.40 ಸುಮಾರಿಗೆ ಸರಿಯಾಗಿ ಕಾವೇರಿ…

16 hours ago