Advertisement
MIRROR FOCUS

ದೇಶದಲ್ಲಿ ಸುಮಾರು 70 ರಷ್ಟು ಜನರು ಕೃಷಿ ಅವಲಂಬಿತರು | ಸಿರಿಧಾನ್ಯ ಬೆಳೆಯಲು ರೈತರು ಒಲವು ತೋರಿಸಿ |

Share

ಭಾರತ ದೇಶದಲ್ಲಿ ಸುಮಾರು  ಶೇಕಡಾ 70 ರಷ್ಟು ಜನರು ಕೃಷಿಯನ್ನು ಅವಲಂಭಿಸಿದ್ದಾರೆ.  ಈ ಜಗತ್ತಿನಲ್ಲಿ ಸಿರಿದಾನ್ಯಗಳ ಬಳಕೆ ಹೆಚ್ಚಾಗಬೇಕು ಮತ್ತು ಇಂದಿನ ಮಕ್ಕಳು ಅವುಗಳನ್ನು ಉಪಯೋಗಿಸಿದಾಗ ಆರೋಗ್ಯದ ಸಮಸ್ಯೆಗಳನ್ನು ಸುಧಾರಿಸಲು ಸಹಕಾರಿಯಾಗುತ್ತದೆ ಎಂದು  ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು. 

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ವತಿಯಿಂದ  ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ವಿಶ್ವ ಆಹಾರ ದಿನಾಚರಣೆ- 2024ರ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

1960 ರಿಂದ 1965 ರ  ಅವಧಿಯಲ್ಲಿ ನಾನು ಪ್ರೌಢಶಾಲಾ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ 4 ನಾಲ್ಕು ವರ್ಷಗಳ ಕಾಲ ಮಳೆ ಅಭಾವವಾಗಿತ್ತು ಅಂದು ನಾನು ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದೆ ಎಂದರು.  ನಂತರ ಅಂದಿನ ಪ್ರಧಾನಿ ಲಾಲ ಬಹಾದೂರ್ ಶಾಸ್ತ್ರಿ ಅವರು ದೇಶದಲ್ಲಿ ಆಹಾರದ ಕೊರತೆ ಇದ್ದಾಗ ಜನರು ಒಂದು ಒತ್ತಿನ ಊಟವನ್ನು ಬಿಡಬೇಕು ಎಂಬ ಕರೆ ನೀಡಿದ್ದರು. ನಂತರ ಎಲ್ಲರೂ ಅದನ್ನು ಅನುಸರಿಸಿ ಆಹಾರದ ಅಭಾವವನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಮಾಡಿದ್ದರು.  ಪ್ರಸ್ತುತದ ನಮ್ಮ ಭಾರತ ದೇಶದಲ್ಲಿ ಮೂರು ವರ್ಷಗಳಿಗೆ ಆಗುವಷ್ಟು ಆಹಾರ ದವಸದಾನ್ಯಗಳನ್ನು ನಾವು ಶೇಖರಣೆ ಮಾಡಿದ್ದೇವೆ  ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವಷ್ಟು ಬಲಿಷ್ಠ ವಾಗಿದ್ದೇವೆ. ಸಿರಿದಾನ್ಯಗಳ ಬೆಳೆಯುವ ಪ್ರಮಾಣ ಕಡಿಮೆಯಾಗಿದ್ದು,   ಇವನ್ನು ರೈತರು ತಮ್ಮ ಜಮೀನಿನಲ್ಲಿ ನವಣೆ, ಆರ್ಕಾ,ರಾಗಿ ಭತ್ತ, ಸಜ್ಜೆ  ಮುಂತಾದ ಧಾನ್ಯಗಳನ್ನು ಬೆಳೆಯುವ ಕಡೆ ಗಮನಹರಿಸಬೇಕು ಎಂದು ಸಚಿವರು ಹೇಳಿದರು

ವಿಶ್ವ ಆಹಾರ ದಿನ (World Food Day) ವಿಶ್ವಾದ್ಯಂತ ಅಕ್ಟೋಬರ್ 16ರಂದು ಆಚರಿಸಲಾಗುತ್ತದೆ. 1945ರಲ್ಲಿ ಸಂಯುಕ್ತ ರಾಷ್ಟ್ರಗಳ ಆಹಾರ ಮತ್ತು ಕೃಷಿ ಸಂಘಟನೆಯ (FAO) ಸ್ಥಾಪನೆಯನ್ನು ಗೌರವಿಸುವುದಾಗಿ ಈ ದಿನವನ್ನು ನಿಶ್ಚಿತಗೊಳಿಸಲಾಗಿದೆ ಎಂದರು.  ಆಹಾರದ ಮಹತ್ವ, ಜನರ ಭಕ್ಷ್ಯಮಾನದ ಹಕ್ಕು, ಹಸಿವು ಹಾಗೂ ದಾರಿದ್ರ್ಯ ನಿರ್ಮೂಲನೆಗೆ ಜಾಗೃತಿ ಮೂಡಿಸುವುದಾಗಿದೆ  ಎಂದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ್, ಸಿಂಡಿಕೇಟ್ ಸದಸ್ಯರಾದ ಪ್ರಭಾಕರ ಶೆಟ್ಟಿ,ಹರೀಶ್,ಚಂದ್ರೇಗೌಡ, ನಾರಾಯಣಸ್ವಾಮಿ, ಡೀನ್ ಪ್ರಕಾಶ್, ಸಂಶೋಧನಾ ನಿರ್ದೇಶಕ ಶಿವರಾಮ್, ಪ್ರಾಧ್ಯಾಪಕ ಉಷಾ ರವೀಂದ್ರ, ಕಲ್ಪನಾ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

23 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago