ಸದ್ಯಕ್ಕೆ ಶಾಲಾ ಕಾಲೇಜು ಆರಂಭದ ಬಗ್ಗೆ ಯಾವುದೇ ಯೋಚನೆ ಇಲ್ಲ: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

September 29, 2020
12:43 PM
ಕೊರೋನಾದಿಂದಾಗಿ ಲಾಕ್​ಡೌನ್ ಘೋಷಣೆ ಮಾಡಿದ ಬಳಿಕ ಮಾರ್ಚ್​ ತಿಂಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಅದರ ನಂತರ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು, ಊಹಾಪೋಹದ ವರದಿಗಳು ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ.  ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.  ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror