Advertisement
ಸುದ್ದಿಗಳು

ಸದ್ಯಕ್ಕೆ ಶಾಲಾ ಕಾಲೇಜು ಆರಂಭದ ಬಗ್ಗೆ ಯಾವುದೇ ಯೋಚನೆ ಇಲ್ಲ: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

Share
ಕೊರೋನಾದಿಂದಾಗಿ ಲಾಕ್​ಡೌನ್ ಘೋಷಣೆ ಮಾಡಿದ ಬಳಿಕ ಮಾರ್ಚ್​ ತಿಂಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಅದರ ನಂತರ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು, ಊಹಾಪೋಹದ ವರದಿಗಳು ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ.  ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.  ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

5 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

13 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

14 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago