ಚುನಾವಣಾ ಕಣ | ಎಬಿಪಿ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದ್ದೇನು ? | ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವೇ ? | ಬಿಜೆಪಿ ಮತ್ತೆ ಅಧಿಕಾರ ಪಡೆಯುತ್ತಾ… ? | ರಾಜ್ಯದ ಬಿಜೆಪಿ ಸರ್ಕಾರ ಕಳಪೆ ಎಂದ ಜನ..! |

March 29, 2023
9:20 PM

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್‌ ನಡೆಸಿದ ಸಮೀಕ್ಷೆಯಲ್ಲಿ  ವರದಿ ಬಹಿರಂಗ ಪಡಿಸಿದೆ.  ಇದೇ ವೇಳೆ  ಜೀ ನ್ಯೂಸ್‌ ಹಾಗೂ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ  ತಿಳಿಸಿದೆ.

ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ.  ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.

ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು  ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.

ಇದೇ ವೇಳೆ ಜೀ ನ್ಯೂಸ್‌ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ  ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್‌ 88-98 ಸ್ಥಾನ ಪಡೆಯಲಿದೆ. ಜೆಡಿಎಸ್‌ 2-7 ಸ್ಥಾನ ಪಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror