ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ವರದಿ ಬಹಿರಂಗ ಪಡಿಸಿದೆ. ಇದೇ ವೇಳೆ ಜೀ ನ್ಯೂಸ್ ಹಾಗೂ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.
ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ. ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.
ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.
ಇದೇ ವೇಳೆ ಜೀ ನ್ಯೂಸ್ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್ 88-98 ಸ್ಥಾನ ಪಡೆಯಲಿದೆ. ಜೆಡಿಎಸ್ 2-7 ಸ್ಥಾನ ಪಡೆಯಲಿದೆ.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…