ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ವರದಿ ಬಹಿರಂಗ ಪಡಿಸಿದೆ. ಇದೇ ವೇಳೆ ಜೀ ನ್ಯೂಸ್ ಹಾಗೂ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.
ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ. ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.
ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.
ಇದೇ ವೇಳೆ ಜೀ ನ್ಯೂಸ್ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್ 88-98 ಸ್ಥಾನ ಪಡೆಯಲಿದೆ. ಜೆಡಿಎಸ್ 2-7 ಸ್ಥಾನ ಪಡೆಯಲಿದೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…