ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್ ನಡೆಸಿದ ಸಮೀಕ್ಷೆಯಲ್ಲಿ ವರದಿ ಬಹಿರಂಗ ಪಡಿಸಿದೆ. ಇದೇ ವೇಳೆ ಜೀ ನ್ಯೂಸ್ ಹಾಗೂ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.
ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ. ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.
ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.
ಇದೇ ವೇಳೆ ಜೀ ನ್ಯೂಸ್ ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್ 88-98 ಸ್ಥಾನ ಪಡೆಯಲಿದೆ. ಜೆಡಿಎಸ್ 2-7 ಸ್ಥಾನ ಪಡೆಯಲಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…