Advertisement
ಸುದ್ದಿಗಳು

ಚುನಾವಣಾ ಕಣ | ಎಬಿಪಿ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದ್ದೇನು ? | ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವೇ ? | ಬಿಜೆಪಿ ಮತ್ತೆ ಅಧಿಕಾರ ಪಡೆಯುತ್ತಾ… ? | ರಾಜ್ಯದ ಬಿಜೆಪಿ ಸರ್ಕಾರ ಕಳಪೆ ಎಂದ ಜನ..! |

Share

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್‌ ನಡೆಸಿದ ಸಮೀಕ್ಷೆಯಲ್ಲಿ  ವರದಿ ಬಹಿರಂಗ ಪಡಿಸಿದೆ.  ಇದೇ ವೇಳೆ  ಜೀ ನ್ಯೂಸ್‌ ಹಾಗೂ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ  ತಿಳಿಸಿದೆ.

ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ.  ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.

ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು  ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.

ಇದೇ ವೇಳೆ ಜೀ ನ್ಯೂಸ್‌ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ  ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್‌ 88-98 ಸ್ಥಾನ ಪಡೆಯಲಿದೆ. ಜೆಡಿಎಸ್‌ 2-7 ಸ್ಥಾನ ಪಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago