ಸುದ್ದಿಗಳು

ಸುಳ್ಯ : ಕ್ಯಾಂಪಸ್ ಫ್ರಂಟ್‌ ಕಾರ್ಯಕರ್ತರ ವರ್ತನೆಗೆ ಎಬಿವಿಪಿ ಖಂಡನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ನಿಯಮ ಉಲ್ಲಂಘಿಸಿದ ಬಗ್ಗೆ ಧಾರ್ಮಿಕ ವಿಚಾರ ಮುಂದಿಟ್ಟು ಕ್ಯಾಂಪಸ್ ಫ್ರಂಟ್‌ ಕಾರ್ಯಕರ್ತರ ವರ್ತನೆಯನ್ನು ಎಬಿವಿಪಿ ಖಂಡಿಸಿದೆ.
ಕಾಲೇಜು ಆವರಣದಲ್ಲಿ ಗೊಂದಲವನ್ನು ಸೃಷ್ಟಿಸಿದ ಕ್ಯಾಂಪಸ್ ಫ್ರಂಟ್‌ ಪ್ರಮುಖರು ಅನಾಗರಿಕ ವರ್ತನೆ ತೋರಿದ್ದಾರೆ. ಕ್ಯಾಂಪಸ್ ಫ್ರಂಟ್‌ನ ಕಾರ್ಯಕರ್ತರೆಂದು ಹೇಳಿಕೊಳ್ಳುವ ವ್ಯಕ್ತಿಗಳು ಕಾಲೇಜಿನ ಆವರಣಕ್ಕೆ ಅಕ್ರಮ ಪ್ರವೇಶ ಮಾಡಿ ಕಾಲೇಜಿನ ಗೇಟಿಗೆ ಬೀಗ ಹಾಕಿ ಪರೀಕ್ಷಾ ಸಮಯದಲ್ಲಿ ದಾಂಧಲೆ ನಡೆಸಿ ಗೊಂದಲ ಹುಟ್ಟಿಸಿರುವುದು ಕಾನೂನು ಬಾಹಿರವಾಗಿರುತ್ತದೆ. ಕಾಲೇಜಿಗೆ ಬರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಮಾನ ರೀತಿಯ ನೀತಿ ನಿಯಮಗಳಿದ್ದು, ಅದನ್ನು ಉಲ್ಲಂಘಿಸುವ ಯಾವುದೇ ವಿದ್ಯಾರ್ಥಿನಿಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವರೇ ಆಡಳಿತ ಮಂಡಳಿಗೆ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ನಮ್ಮ ವಿದ್ಯಾರ್ಥಿ ಪರಿಷತ್ತು ಘಟಕ ಬೆಂಬಲಿಸುತ್ತದೆ ಎಂದು ಎಬಿವಿಪಿ ಪ್ರಕಟಣೆ ತಿಳಿಸಿದೆ.
ಈ ವಿಚಾರದ ಬಗ್ಗೆ ಕೆ.ವಿ.ಜಿ.ಕಾನೂನು ಕಾಲೇಜು ಆಡಳಿತ ಮಂಡಳಿ ಕಾಲೇಜಿನ ನಿಯಮವನ್ನು ಉಲ್ಲಂಘನೆ ಮಾಡಿ, ಕೋಮು ಭಾವನೆಯನ್ನು ಕೆರಳಿಸಲು ವರ್ತಿಸುವವರ ವಿರುದ್ಧ ಯಾವುದೇ ಪ್ರಭಾವ ಮತ್ತು ಬೆದರಿಕೆಗೆ ಬಗ್ಗದೆ ಕಠಿಣ ನಿಲುವನ್ನು ವ್ಯಕ್ತಪಡಿಸಬೇಕು. ಶಿಕ್ಷಣ ಸಂಸ್ಥೆಯ ಮತ್ತು ಶೈಕ್ಷಣಿಕ ನಿಯಮಗಳಿಗೆ ವಿದ್ಯಾರ್ಥಿಗಳ ಭಾವನೆಗಳಿಗೆ ಕುಂದು ಉಂಟಾದಾಗ ಅದರ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಹೋರಾಟಕ್ಕೆ ಸದಾ ಸಿದ್ಧವಾಗಿರುತ್ತದೆ ಎಂದು ಕೆ.ವಿ.ಜಿ ಕಾನೂನು ಕಾಲೇಜು ಅ.ಭಾ.ವಿ.ಪ. ಘಟಕದ ಕಾರ್ಯದರ್ಶಿ ಕಾರ್ತಿಕ್ ಬದಿವನ ಹೇಳಿಕೆಯಲ್ಲಿ ತಿಳಿಸಿದ್ದಾರೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

6 hours ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

9 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

9 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

17 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

19 hours ago