ಈಗ ಬಂದಿದೆ ಎಸಿ ಹೆಲ್ಮೆಟ್‌…. !!

November 12, 2021
9:37 PM

ಹಲವು ಬಗೆಯ ಸುರಕ್ಷತಾ ಹೆಲ್ಮೆಟ್‌ಗಳು ಇದೆ. ಆದರೆ ಇದೀಗ ಹವಾನಿಯಂತ್ರಿತ ಸುರಕ್ಷತಾ ಹೆಲ್ಮೆಟ್ ಇದೀಗ ಲಭ್ಯವಾಗುತ್ತಿದೆ. ವಿಶ್ವದಲ್ಲೇ ಮೊಟ್ಟ ಮೊದಲ ಎಸಿ ಸುರಕ್ಷತಾ ಹೆಲ್ಮೆಟ್ ಎನ್ನಲಾಗಿದೆ. ಈ ಸುರಕ್ಷತಾ ಹೆಲ್ಮೆಟ್ ವಿಶೇಷತೆಗಳು ಅಚ್ಚರಿ ಮೂಡಿಸುವಂತಿದ್ದು, ಭಾರತೀಯ ಮೂಲಕದ ಸ್ಟಾರ್ಟ್‌ ಅಪ್‌ ಕಂಪನಿಯು ಇದನ್ನು ಪರಿಚಯಿಸಿದೆ.

ದುಬೈನ ಎಕ್ಸ್‌ಪೋ 2020 ರಲ್ಲಿ ಭಾರತೀಯ ಪೆವಿಲಿಯನ್‌ನಲ್ಲಿ ಈ ಎಸಿ ಹೆಲ್ಮೆಟ್‌ ಅನಾವರಣಗೊಳಿಸಲಾಗಿದೆ. ಈ ಹೆಲ್ಮೆಟ್‌ಗಳ ಶ್ರೇಣಿಯನ್ನು ಭಾರತದ ಸ್ಟಾರ್ಟ್ ಅಪ್ ಕಂಪನಿ ಜಾರ್ಶ್ ಸೇಫ್ಟಿ ಅಭಿವೃದ್ಧಿಪಡಿಸಿದೆ. ದುಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕಂಪನಿಯಾದ ಎಲೆಕ್ಟ್ರಾನಿಕ್ಸ್ ವಿತರಕ ಎನ್‌ಐಎ  ಲಿಮಿಟೆಡ್ ಅನಾವರಣಗೊಳಿಸಿದೆ. ಇದು ಮುಖದ ಶೀಲ್ಡ್‌ನೊಂದಿಗೆ ಸಂಪೂರ್ಣವಾದ ವಿಶೇಷ ವೆಲ್ಡಿಂಗ್ ಹೆಲ್ಮೆಟ್ಟುಗಳು ನಾಲ್ಕು ಮಾರ್ಪಾಡುಗಳ ರಚನೆ ಪಡೆದಿದೆ.

ಮುಖ್ಯವಾಗಿ ಈ ಹೆಲ್ಮೆಟ್ ವಿವಿಧ ಫ್ಯಾಕ್ಟರಿಗಳಲ್ಲಿನ ಮೆಷಿನ್ ಆಪರೇಟರ್‌ಗಳು, ನುರಿತ ತಂತ್ರಜ್ಞರು, ಸೈಟ್ ಮ್ಯಾನೇಜರ್‌ಗಳು, ಹಾಗೆಯೇ ಅಧಿಕ ಉಷ್ಣತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಇದು ಬಹಳ ಉಪಯುಕ್ತವಾಗಿದೆ ಎಂದು ಕಂಪನಿ ಹೇಳಿದೆ. ಈ ಹೆಲ್ಮೆಟ್ ಆವಿಷ್ಕಾರ ಮಾಡಿರುವ ಕೌಸ್ತುಬ್ ಕೌಂಡಿನ್ಯ, ಶ್ರೀಕಾಂತ್ ಕೊಮ್ಮುಲಾ ಮತ್ತು ಆನಂದ್ ಕುಮಾರ್ ಅವರು 2016 ರಲ್ಲಿ ಬಿಸಿ ವಾತಾವರಣದಲ್ಲಿ ಸುರಕ್ಷತಾ ಹೆಲ್ಮೆಟ್‌ಗಳನ್ನು ಬಳಸುವಾಗ ಅಸ್ವಸ್ಥತೆ ಅನುಭವಿಸಿದ ನಂತರ ಜಾರ್ಶ್ ಎಸಿ ಹೆಲ್ಮೆಟ್‌ನ ಮೂಲ ಮಾದರಿಯನ್ನು ತಯಾರಿಸಿದರು. ಇದನ್ನು ಅಭಿವೃದ್ಧಿಪಡಿಸಲು ಎರಡು ವರ್ಷಗಳಿಗಿಂತಲೂ ಹೆಚ್ಚು ಕಾಲ ಸಂಶೋಧನೆಯನ್ನು ತೆಗೆದುಕೊಂಡಿದೆ ಎಂದು‌ ಕೌಸ್ತುಬ್‌ ಕೌಂಡಿನ್ಯ ಹೇಳಿದರು.

ಇದರಲ್ಲಿ ಯಾವುದೇ ಶೀತಕ ದ್ರವಗಳನ್ನು ಬಳಸಲಾಗುವುದಿಲ್ಲ, ಬದಲಾಗಿ ತಂಪಾದ ಗಾಳಿಯನ್ನು ಪ್ರಸಾರ ಮಾಡುವ ತಂತ್ರಜ್ಞಾನ ಅಳವಡಿಸಲಾಗಿದೆ. ಹೆಲ್ಮೆಟ್‌ನ ಟರ್ಬೊ ಕೂಲಿಂಗ್ ಹೆಲ್ಮೆಟ್‌ನೊಳಗಿನ ತಾಪಮಾನವನ್ನು ಮೂರರಿಂದ ಐದು ನಿಮಿಷಗಳಲ್ಲಿ ಕೇವಲ 15 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಿಸುತ್ತದೆ, ಹವಾನಿಯಂತ್ರಿತ ಹೆಲ್ಮೆಟ್‌ನಲ್ಲಿ ಒಂದೇ ಚಾರ್ಜ್ ಸುಮಾರು 10 ಗಂಟೆಗಳ ವರೆಗೆ ಇರುತ್ತದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror