Advertisement
ಸುದ್ದಿಗಳು

ಈಗ ಬಂದಿದೆ ಎಸಿ ಹೆಲ್ಮೆಟ್‌…. !!

Share

ಹಲವು ಬಗೆಯ ಸುರಕ್ಷತಾ ಹೆಲ್ಮೆಟ್‌ಗಳು ಇದೆ. ಆದರೆ ಇದೀಗ ಹವಾನಿಯಂತ್ರಿತ ಸುರಕ್ಷತಾ ಹೆಲ್ಮೆಟ್ ಇದೀಗ ಲಭ್ಯವಾಗುತ್ತಿದೆ. ವಿಶ್ವದಲ್ಲೇ ಮೊಟ್ಟ ಮೊದಲ ಎಸಿ ಸುರಕ್ಷತಾ ಹೆಲ್ಮೆಟ್ ಎನ್ನಲಾಗಿದೆ. ಈ ಸುರಕ್ಷತಾ ಹೆಲ್ಮೆಟ್ ವಿಶೇಷತೆಗಳು ಅಚ್ಚರಿ ಮೂಡಿಸುವಂತಿದ್ದು, ಭಾರತೀಯ ಮೂಲಕದ ಸ್ಟಾರ್ಟ್‌ ಅಪ್‌ ಕಂಪನಿಯು ಇದನ್ನು ಪರಿಚಯಿಸಿದೆ.

ದುಬೈನ ಎಕ್ಸ್‌ಪೋ 2020 ರಲ್ಲಿ ಭಾರತೀಯ ಪೆವಿಲಿಯನ್‌ನಲ್ಲಿ ಈ ಎಸಿ ಹೆಲ್ಮೆಟ್‌ ಅನಾವರಣಗೊಳಿಸಲಾಗಿದೆ. ಈ ಹೆಲ್ಮೆಟ್‌ಗಳ ಶ್ರೇಣಿಯನ್ನು ಭಾರತದ ಸ್ಟಾರ್ಟ್ ಅಪ್ ಕಂಪನಿ ಜಾರ್ಶ್ ಸೇಫ್ಟಿ ಅಭಿವೃದ್ಧಿಪಡಿಸಿದೆ. ದುಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕಂಪನಿಯಾದ ಎಲೆಕ್ಟ್ರಾನಿಕ್ಸ್ ವಿತರಕ ಎನ್‌ಐಎ  ಲಿಮಿಟೆಡ್ ಅನಾವರಣಗೊಳಿಸಿದೆ. ಇದು ಮುಖದ ಶೀಲ್ಡ್‌ನೊಂದಿಗೆ ಸಂಪೂರ್ಣವಾದ ವಿಶೇಷ ವೆಲ್ಡಿಂಗ್ ಹೆಲ್ಮೆಟ್ಟುಗಳು ನಾಲ್ಕು ಮಾರ್ಪಾಡುಗಳ ರಚನೆ ಪಡೆದಿದೆ.

ಮುಖ್ಯವಾಗಿ ಈ ಹೆಲ್ಮೆಟ್ ವಿವಿಧ ಫ್ಯಾಕ್ಟರಿಗಳಲ್ಲಿನ ಮೆಷಿನ್ ಆಪರೇಟರ್‌ಗಳು, ನುರಿತ ತಂತ್ರಜ್ಞರು, ಸೈಟ್ ಮ್ಯಾನೇಜರ್‌ಗಳು, ಹಾಗೆಯೇ ಅಧಿಕ ಉಷ್ಣತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಇದು ಬಹಳ ಉಪಯುಕ್ತವಾಗಿದೆ ಎಂದು ಕಂಪನಿ ಹೇಳಿದೆ. ಈ ಹೆಲ್ಮೆಟ್ ಆವಿಷ್ಕಾರ ಮಾಡಿರುವ ಕೌಸ್ತುಬ್ ಕೌಂಡಿನ್ಯ, ಶ್ರೀಕಾಂತ್ ಕೊಮ್ಮುಲಾ ಮತ್ತು ಆನಂದ್ ಕುಮಾರ್ ಅವರು 2016 ರಲ್ಲಿ ಬಿಸಿ ವಾತಾವರಣದಲ್ಲಿ ಸುರಕ್ಷತಾ ಹೆಲ್ಮೆಟ್‌ಗಳನ್ನು ಬಳಸುವಾಗ ಅಸ್ವಸ್ಥತೆ ಅನುಭವಿಸಿದ ನಂತರ ಜಾರ್ಶ್ ಎಸಿ ಹೆಲ್ಮೆಟ್‌ನ ಮೂಲ ಮಾದರಿಯನ್ನು ತಯಾರಿಸಿದರು. ಇದನ್ನು ಅಭಿವೃದ್ಧಿಪಡಿಸಲು ಎರಡು ವರ್ಷಗಳಿಗಿಂತಲೂ ಹೆಚ್ಚು ಕಾಲ ಸಂಶೋಧನೆಯನ್ನು ತೆಗೆದುಕೊಂಡಿದೆ ಎಂದು‌ ಕೌಸ್ತುಬ್‌ ಕೌಂಡಿನ್ಯ ಹೇಳಿದರು.

ಇದರಲ್ಲಿ ಯಾವುದೇ ಶೀತಕ ದ್ರವಗಳನ್ನು ಬಳಸಲಾಗುವುದಿಲ್ಲ, ಬದಲಾಗಿ ತಂಪಾದ ಗಾಳಿಯನ್ನು ಪ್ರಸಾರ ಮಾಡುವ ತಂತ್ರಜ್ಞಾನ ಅಳವಡಿಸಲಾಗಿದೆ. ಹೆಲ್ಮೆಟ್‌ನ ಟರ್ಬೊ ಕೂಲಿಂಗ್ ಹೆಲ್ಮೆಟ್‌ನೊಳಗಿನ ತಾಪಮಾನವನ್ನು ಮೂರರಿಂದ ಐದು ನಿಮಿಷಗಳಲ್ಲಿ ಕೇವಲ 15 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಿಸುತ್ತದೆ, ಹವಾನಿಯಂತ್ರಿತ ಹೆಲ್ಮೆಟ್‌ನಲ್ಲಿ ಒಂದೇ ಚಾರ್ಜ್ ಸುಮಾರು 10 ಗಂಟೆಗಳ ವರೆಗೆ ಇರುತ್ತದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago