Advertisement
ಸುದ್ದಿಗಳು

ಈಗ ಬಂದಿದೆ ಎಸಿ ಹೆಲ್ಮೆಟ್‌…. !!

Share

ಹಲವು ಬಗೆಯ ಸುರಕ್ಷತಾ ಹೆಲ್ಮೆಟ್‌ಗಳು ಇದೆ. ಆದರೆ ಇದೀಗ ಹವಾನಿಯಂತ್ರಿತ ಸುರಕ್ಷತಾ ಹೆಲ್ಮೆಟ್ ಇದೀಗ ಲಭ್ಯವಾಗುತ್ತಿದೆ. ವಿಶ್ವದಲ್ಲೇ ಮೊಟ್ಟ ಮೊದಲ ಎಸಿ ಸುರಕ್ಷತಾ ಹೆಲ್ಮೆಟ್ ಎನ್ನಲಾಗಿದೆ. ಈ ಸುರಕ್ಷತಾ ಹೆಲ್ಮೆಟ್ ವಿಶೇಷತೆಗಳು ಅಚ್ಚರಿ ಮೂಡಿಸುವಂತಿದ್ದು, ಭಾರತೀಯ ಮೂಲಕದ ಸ್ಟಾರ್ಟ್‌ ಅಪ್‌ ಕಂಪನಿಯು ಇದನ್ನು ಪರಿಚಯಿಸಿದೆ.

ದುಬೈನ ಎಕ್ಸ್‌ಪೋ 2020 ರಲ್ಲಿ ಭಾರತೀಯ ಪೆವಿಲಿಯನ್‌ನಲ್ಲಿ ಈ ಎಸಿ ಹೆಲ್ಮೆಟ್‌ ಅನಾವರಣಗೊಳಿಸಲಾಗಿದೆ. ಈ ಹೆಲ್ಮೆಟ್‌ಗಳ ಶ್ರೇಣಿಯನ್ನು ಭಾರತದ ಸ್ಟಾರ್ಟ್ ಅಪ್ ಕಂಪನಿ ಜಾರ್ಶ್ ಸೇಫ್ಟಿ ಅಭಿವೃದ್ಧಿಪಡಿಸಿದೆ. ದುಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕಂಪನಿಯಾದ ಎಲೆಕ್ಟ್ರಾನಿಕ್ಸ್ ವಿತರಕ ಎನ್‌ಐಎ  ಲಿಮಿಟೆಡ್ ಅನಾವರಣಗೊಳಿಸಿದೆ. ಇದು ಮುಖದ ಶೀಲ್ಡ್‌ನೊಂದಿಗೆ ಸಂಪೂರ್ಣವಾದ ವಿಶೇಷ ವೆಲ್ಡಿಂಗ್ ಹೆಲ್ಮೆಟ್ಟುಗಳು ನಾಲ್ಕು ಮಾರ್ಪಾಡುಗಳ ರಚನೆ ಪಡೆದಿದೆ.

ಮುಖ್ಯವಾಗಿ ಈ ಹೆಲ್ಮೆಟ್ ವಿವಿಧ ಫ್ಯಾಕ್ಟರಿಗಳಲ್ಲಿನ ಮೆಷಿನ್ ಆಪರೇಟರ್‌ಗಳು, ನುರಿತ ತಂತ್ರಜ್ಞರು, ಸೈಟ್ ಮ್ಯಾನೇಜರ್‌ಗಳು, ಹಾಗೆಯೇ ಅಧಿಕ ಉಷ್ಣತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಇದು ಬಹಳ ಉಪಯುಕ್ತವಾಗಿದೆ ಎಂದು ಕಂಪನಿ ಹೇಳಿದೆ. ಈ ಹೆಲ್ಮೆಟ್ ಆವಿಷ್ಕಾರ ಮಾಡಿರುವ ಕೌಸ್ತುಬ್ ಕೌಂಡಿನ್ಯ, ಶ್ರೀಕಾಂತ್ ಕೊಮ್ಮುಲಾ ಮತ್ತು ಆನಂದ್ ಕುಮಾರ್ ಅವರು 2016 ರಲ್ಲಿ ಬಿಸಿ ವಾತಾವರಣದಲ್ಲಿ ಸುರಕ್ಷತಾ ಹೆಲ್ಮೆಟ್‌ಗಳನ್ನು ಬಳಸುವಾಗ ಅಸ್ವಸ್ಥತೆ ಅನುಭವಿಸಿದ ನಂತರ ಜಾರ್ಶ್ ಎಸಿ ಹೆಲ್ಮೆಟ್‌ನ ಮೂಲ ಮಾದರಿಯನ್ನು ತಯಾರಿಸಿದರು. ಇದನ್ನು ಅಭಿವೃದ್ಧಿಪಡಿಸಲು ಎರಡು ವರ್ಷಗಳಿಗಿಂತಲೂ ಹೆಚ್ಚು ಕಾಲ ಸಂಶೋಧನೆಯನ್ನು ತೆಗೆದುಕೊಂಡಿದೆ ಎಂದು‌ ಕೌಸ್ತುಬ್‌ ಕೌಂಡಿನ್ಯ ಹೇಳಿದರು.

ಇದರಲ್ಲಿ ಯಾವುದೇ ಶೀತಕ ದ್ರವಗಳನ್ನು ಬಳಸಲಾಗುವುದಿಲ್ಲ, ಬದಲಾಗಿ ತಂಪಾದ ಗಾಳಿಯನ್ನು ಪ್ರಸಾರ ಮಾಡುವ ತಂತ್ರಜ್ಞಾನ ಅಳವಡಿಸಲಾಗಿದೆ. ಹೆಲ್ಮೆಟ್‌ನ ಟರ್ಬೊ ಕೂಲಿಂಗ್ ಹೆಲ್ಮೆಟ್‌ನೊಳಗಿನ ತಾಪಮಾನವನ್ನು ಮೂರರಿಂದ ಐದು ನಿಮಿಷಗಳಲ್ಲಿ ಕೇವಲ 15 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಿಸುತ್ತದೆ, ಹವಾನಿಯಂತ್ರಿತ ಹೆಲ್ಮೆಟ್‌ನಲ್ಲಿ ಒಂದೇ ಚಾರ್ಜ್ ಸುಮಾರು 10 ಗಂಟೆಗಳ ವರೆಗೆ ಇರುತ್ತದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

3 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

3 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

8 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

8 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

8 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

23 hours ago