Advertisement
ಸುದ್ದಿಗಳು

ಈಗ ಬಂದಿದೆ ಎಸಿ ಹೆಲ್ಮೆಟ್‌…. !!

Share

ಹಲವು ಬಗೆಯ ಸುರಕ್ಷತಾ ಹೆಲ್ಮೆಟ್‌ಗಳು ಇದೆ. ಆದರೆ ಇದೀಗ ಹವಾನಿಯಂತ್ರಿತ ಸುರಕ್ಷತಾ ಹೆಲ್ಮೆಟ್ ಇದೀಗ ಲಭ್ಯವಾಗುತ್ತಿದೆ. ವಿಶ್ವದಲ್ಲೇ ಮೊಟ್ಟ ಮೊದಲ ಎಸಿ ಸುರಕ್ಷತಾ ಹೆಲ್ಮೆಟ್ ಎನ್ನಲಾಗಿದೆ. ಈ ಸುರಕ್ಷತಾ ಹೆಲ್ಮೆಟ್ ವಿಶೇಷತೆಗಳು ಅಚ್ಚರಿ ಮೂಡಿಸುವಂತಿದ್ದು, ಭಾರತೀಯ ಮೂಲಕದ ಸ್ಟಾರ್ಟ್‌ ಅಪ್‌ ಕಂಪನಿಯು ಇದನ್ನು ಪರಿಚಯಿಸಿದೆ.

ದುಬೈನ ಎಕ್ಸ್‌ಪೋ 2020 ರಲ್ಲಿ ಭಾರತೀಯ ಪೆವಿಲಿಯನ್‌ನಲ್ಲಿ ಈ ಎಸಿ ಹೆಲ್ಮೆಟ್‌ ಅನಾವರಣಗೊಳಿಸಲಾಗಿದೆ. ಈ ಹೆಲ್ಮೆಟ್‌ಗಳ ಶ್ರೇಣಿಯನ್ನು ಭಾರತದ ಸ್ಟಾರ್ಟ್ ಅಪ್ ಕಂಪನಿ ಜಾರ್ಶ್ ಸೇಫ್ಟಿ ಅಭಿವೃದ್ಧಿಪಡಿಸಿದೆ. ದುಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕಂಪನಿಯಾದ ಎಲೆಕ್ಟ್ರಾನಿಕ್ಸ್ ವಿತರಕ ಎನ್‌ಐಎ  ಲಿಮಿಟೆಡ್ ಅನಾವರಣಗೊಳಿಸಿದೆ. ಇದು ಮುಖದ ಶೀಲ್ಡ್‌ನೊಂದಿಗೆ ಸಂಪೂರ್ಣವಾದ ವಿಶೇಷ ವೆಲ್ಡಿಂಗ್ ಹೆಲ್ಮೆಟ್ಟುಗಳು ನಾಲ್ಕು ಮಾರ್ಪಾಡುಗಳ ರಚನೆ ಪಡೆದಿದೆ.

ಮುಖ್ಯವಾಗಿ ಈ ಹೆಲ್ಮೆಟ್ ವಿವಿಧ ಫ್ಯಾಕ್ಟರಿಗಳಲ್ಲಿನ ಮೆಷಿನ್ ಆಪರೇಟರ್‌ಗಳು, ನುರಿತ ತಂತ್ರಜ್ಞರು, ಸೈಟ್ ಮ್ಯಾನೇಜರ್‌ಗಳು, ಹಾಗೆಯೇ ಅಧಿಕ ಉಷ್ಣತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಇದು ಬಹಳ ಉಪಯುಕ್ತವಾಗಿದೆ ಎಂದು ಕಂಪನಿ ಹೇಳಿದೆ. ಈ ಹೆಲ್ಮೆಟ್ ಆವಿಷ್ಕಾರ ಮಾಡಿರುವ ಕೌಸ್ತುಬ್ ಕೌಂಡಿನ್ಯ, ಶ್ರೀಕಾಂತ್ ಕೊಮ್ಮುಲಾ ಮತ್ತು ಆನಂದ್ ಕುಮಾರ್ ಅವರು 2016 ರಲ್ಲಿ ಬಿಸಿ ವಾತಾವರಣದಲ್ಲಿ ಸುರಕ್ಷತಾ ಹೆಲ್ಮೆಟ್‌ಗಳನ್ನು ಬಳಸುವಾಗ ಅಸ್ವಸ್ಥತೆ ಅನುಭವಿಸಿದ ನಂತರ ಜಾರ್ಶ್ ಎಸಿ ಹೆಲ್ಮೆಟ್‌ನ ಮೂಲ ಮಾದರಿಯನ್ನು ತಯಾರಿಸಿದರು. ಇದನ್ನು ಅಭಿವೃದ್ಧಿಪಡಿಸಲು ಎರಡು ವರ್ಷಗಳಿಗಿಂತಲೂ ಹೆಚ್ಚು ಕಾಲ ಸಂಶೋಧನೆಯನ್ನು ತೆಗೆದುಕೊಂಡಿದೆ ಎಂದು‌ ಕೌಸ್ತುಬ್‌ ಕೌಂಡಿನ್ಯ ಹೇಳಿದರು.

ಇದರಲ್ಲಿ ಯಾವುದೇ ಶೀತಕ ದ್ರವಗಳನ್ನು ಬಳಸಲಾಗುವುದಿಲ್ಲ, ಬದಲಾಗಿ ತಂಪಾದ ಗಾಳಿಯನ್ನು ಪ್ರಸಾರ ಮಾಡುವ ತಂತ್ರಜ್ಞಾನ ಅಳವಡಿಸಲಾಗಿದೆ. ಹೆಲ್ಮೆಟ್‌ನ ಟರ್ಬೊ ಕೂಲಿಂಗ್ ಹೆಲ್ಮೆಟ್‌ನೊಳಗಿನ ತಾಪಮಾನವನ್ನು ಮೂರರಿಂದ ಐದು ನಿಮಿಷಗಳಲ್ಲಿ ಕೇವಲ 15 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಿಸುತ್ತದೆ, ಹವಾನಿಯಂತ್ರಿತ ಹೆಲ್ಮೆಟ್‌ನಲ್ಲಿ ಒಂದೇ ಚಾರ್ಜ್ ಸುಮಾರು 10 ಗಂಟೆಗಳ ವರೆಗೆ ಇರುತ್ತದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

17 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

22 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago