ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ.23 ರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಸ್ವೀಕರಿಸಲಿದ್ದಾರೆ.
ಸುಳ್ಯ ತಾಲೂಕಿನ ದೂರುಗಳನ್ನು ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಮೇ.23ರ ಸೋಮವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಪುತ್ತೂರು ತಾಲೂಕಿಗೆ ಸಂಬಂಧಿಸಿದಂತೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಮೇ.24ರ ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕಿಗೆ ಸಂಬಂಧಿಸಿದಂತೆ ಮೇ.24ರ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಮೇ.25ರ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರ ವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…